30.9 C
Mumbai
June 8, 2026
Mumbai News Kannada
ಪ್ರಕಟಣೆ

ಮಾ. 9, ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ





ಥಾಣೆ;  ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ, ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮನೋರಂಜನಾ ಕಾರ್ಯಕ್ರಮವು ಮಾರ್ಚ್ 9 ರ ರವಿವಾರದಂದು  ಥಾಣೆ ಪಶ್ಚಿಮದ ಶಿವಾಜಿ ಪಥ, ಜಗದೀಶ್ ಬುಕ್ ಡೀಪೊದ ಹತ್ತಿರದ ಸಂತೋಷಿ ಮಾತ ಸಭಾಗೃಹದಲ್ಲಿ ಅಪರಾಹ್ನ 3.30 ಗಂಟೆಗೆ ಸರಿಯಾಗಿ ಸಂಘದ ಅಧ್ಯಕ್ಷರಾದ ಸಿ.ಎ.ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾದ್ಯಾಪಕಿ ಡಾ. ಪೂರ್ಣಿಮಾ ಎಸ್. ಶೆಟ್ಟಿ, ಗೌರವ ಅತಿಥಿಯಾಗಿ ಉದ್ಯಮಿ ಸಮಾಜ ಸೇವಕಿ ಯಶೋದ ಎನ್. ಪೂಜಾರಿ, ಅತಿಥಿಯಾಗಿ ಸೆಂಟ್ ಲಾರೆನ್ಸ್ ಇಂಟರ್ನ್ಯಾಷನಲ್ ಸ್ಕೂಲ್ ನ ಶಿಕ್ಷಕಿ ಸರೋಜ ಎಸ್.ಅಮಾತಿ , ಅತಿಥಿಯಾಗಿ ಶಿಕ್ಷಣ ಕಾರ್ಯಕ್ರಮದ ನೇತೃತ್ವ ವಹಿಸಿದ ರೂಪ ಪಿ. ಬಿಲ್ಲವ ಭಾಗವಹಿಸಲಿದ್ದಾರೆ.
ಈ ಸಂದರ್ಭ ಸಂಘದ  ಪ್ರಥಮ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಸಮಾಜ ಸೇವಕಿ, ಸಂಘದ ಪೋಷಕರಾದ ಗುಲಾಬಿ ಬಾಬು ಪೂಜಾರಿ ಹಾಗೂ ಜಲಜ ಅಣ್ಣಯ್ಯ ಕೋಡಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಹಿಳಾ ವಿಭಾಗದ ಸದಸ್ಯರಿಂದ ಮತ್ತು ಮಕ್ಕಳಿಂದ ನೃತ್ಯ ವಿವಿಧ ವಿನೋದಾವಳಿ ನಡೆಯಲಿದೆ. ಕುಂದಾಪುರ ಬಿಲ್ಲವ ಸೇವಾ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ಸಂಘದ ಗೌರವ ಅಧ್ಯಕ್ಷರಾ್ ಸುರೇಶ್ ಪೂಜಾರಿ, ಅಧ್ಯಕ್ಷ ಸಿ.ಎ ಪೂಜಾರಿ, ಉಪಾಧ್ಯಕ್ಷರಾದ ಎಸ್.ಕೆ.ಪೂಜಾರಿ, ಬೇಬಿ ರಂಗ ಪೂಜಾರಿ, ಗೌ.ಪ್ರ ಕಾರ್ಯದರ್ಶಿ ಸುಧಾಕರ ಸಿ.ಪೂಜಾರಿ, ಗೌ. ಕೋಶಾಧಿಕಾರಿ ಭಾಸ್ಕರ ಕೆ.ಪೂಜಾರಿ, ಯುವ ಸಂಪದ ಸಮಿತಿಯ ಕಾರ್ಯಾಧ್ಯಕ್ಷ ಉದಯ ಪೂಜಾರಿ, ಧಾರ್ಮಿಕ ಮತ್ತು ಸಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ ಪೂಜಾರಿ, ಮಹಿಳಾ ಸಂಪದ ಕಾರ್ಯಾಧ್ಯಕ್ಷೆ ಸುಶೀಲಾ ಸುರೇಶ್ ಪೂಜಾರಿ, ಉಪಕಾರ್ಯಾಧ್ಯಕ್ಷೆ ಗಿರಿಜ ಕೆ.ಹೊಕ್ಕೊಳ್ಳಿ, ಸುಮತಿ ಎಸ್. ಪೂಜಾರಿ, ಮಹಿಳಾ ಸಂಪದ ಕಾರ್ಯದರ್ಶಿ ಶಾರದಾ ಬಾಬು ಪೂಜಾರಿ, ಜತೆ ಕಾರ್ಯದರ್ಶಿ ವಿಮಲಾ ಎಸ್ . ಪೂಜಾರಿ, ಸುಜಾತ ಪೂಜಾರಿ ಹಾಗೂ ಅಡಳಿತ ಮಂಡಳಿ, ಉಪ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025..

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 15 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಎ. 25ರಂದು ಮೂಡುಶೆಡ್ಡೆಯಲ್ಲಿ ಕಟೀಲು ಮೇಳದಿಂದ 44ನೇ ವರ್ಷದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಸೇವೆ

Mumbai News Desk