30.9 C
Mumbai
June 8, 2026
Mumbai News Kannada
ಮುಂಬಯಿ

ಕರ್ನಾಟಕ ಸಂಘ, ಕಲ್ಯಾಣ : ವಿಶ್ವ ಮಹಿಳಾ ದಿನಾಚರಣೆ






ಕಲ್ಯಾಣ,12/03/25: ಕಳೆದ 20 ವರ್ಷಗಳಿಂದ ಆಚರಿಸುತ್ತಿರುವ ವಿಶ್ವ ಮಹಿಳಾ ದಿನಾಚರಣೆಯನ್ನು ಸಂಘದ ಪ್ರಥಮ ಮಹಿಳಾಧ್ಯಕ್ಷೆ ದಿ. ಶಾರದಾ ಭಾಸ್ಕರ ಶೆಟ್ಟಿಯವರು ಪ್ರಾರಂಭಿಸಿದ್ದು, ಈ ವರ್ಷ 9 ಮಾರ್ಚ 25ರಂದು ಮುರ್ಬಾಡ್ ರಸ್ತೆಯ ಬ್ರಾಹ್ಮಣ ಸೊಸೈಟಿ ಸಭಾಂಗಣದಲ್ಲಿ ಸಂಜೆ 5 ದರಿಂದ ವಿಜ್ರಂಭಣೆಯಿಂದ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತ ವಿಕಾಸ್ ಪರಿಷತ್ ಕಲ್ಯಾಣ ಶಾಖೆಯ ಅಧ್ಯಕ್ಷೆ ಶ್ರೀಮತಿ ಕವಿತ ಮಿಶ್ರ ಆಗಮಿಸಿದ್ದು ಸಮಾಜದ ಎಲ್ಲಾ ರಂಗದಲ್ಲಿಯೂ ಮಹಿಳೆಯರ ಸಾಧನೆಯ ಬಗ್ಗೆ ಉಲ್ಲೇಖಿಸುತ್ತಾ ಬೇಟಿ ಬಚಾವೊ, ಬೇಟಿ ಪಡಾವೊ, ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾ ರಾಜ್ಯ ಹಾಗೂ ಕೇಂದ್ರ ಸರಕಾರಗಳ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉಲ್ಲೇಖಿಸಿದರು. ಜೊತೆಗೆ ಸರಕಾರಿ ಹಾಗೂ ಉದ್ಯಮ ರಂಗಗಳಲ್ಲಿ ಮಹಿಳೆಯರ ಸಾಧನೆಯ ಬಗ್ಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀಮತಿ ವೀಣಾ ನಿಮ್ಕರ್ ರವರು ಗೌರವ ಅತಿಥಿಯಾಗಿ ಭಾಗವಹಿಸಿದ್ದು ಜನರ ಜೀವನದಲ್ಲಿ ಯೋಗಾಭ್ಯಾಸದಿಂದ ಯೋಗ ಸಾಧನೆಯಿಂದ ರೋಗ ಮುಕ್ತ ಜೀವನವನ್ನು ನಡೆಸುವುದು ಸಾದ್ಯ ಎಂದು ತಿಳಿಯ ಹೇಳಿದರಲ್ಲದೆ ಶಾಲಾ ಕಾಲೇಜುಗಳಲ್ಲಿ ಯೋಗವನ್ನು ಭೌತಿಕ ವಿಷಯವನ್ನಾಗಿ ಅನುಷ್ಠಾನ ಗೊಳಿಸಬೇಕು. ಯೋಗ ಶಿಕ್ಷಕರ ನೇಮಕವಾಗಬೇಕು ಎಂದು ಅಭಿಪ್ರಾಯ ಪಟ್ಟರು.

ಈ ಕಾರ್ಯಕ್ರಮದಲ್ಲಿ ಕಲ್ಯಾಣ ಪರಿಸರದ ಪ್ರಸಿದ್ಧ ದಂತ ವೈದ್ಯೆ ಡಾ. ಪ್ರದ್ನ್ಯ ಬಾಬನ್ನವರ್ ರವರನ್ನು ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಗೈದ ಶ್ರೀಮತಿ ಮಹಾಲಕ್ಷ್ಮಿ ತೋರ್ವಿ ಯವರನ್ನು ಶಾಲು ಹೂಗುಚ್ಛ ಸ್ಮರಣಿಕೆಗಳೊಂದಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸಂಘದ ಸದಸ್ಯರಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ವಿವಿಧ ಮನಮೋಹಕ, ಉತ್ಕ್ರಷ್ಟ ನೃತ್ಯ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಶ್ರೀಮತಿ ವಸಂತ ಚಂದ್ರ ಶೇಖರ್ ನಿರ್ದೇಶಿತ “ಅಂದು – ಇಂದು” ಎಂಬ ಕಿರು ನಾಟಕವನ್ನು ಪ್ರಸ್ತುತ ಪಡಿಸಲಾಯಿತು. ಈ ಕಿರು ನಾಟಕದಲ್ಲಿ ವಸಂತ ಚಂದ್ರ ಶೇಖರ್, ಪೂಜಾ ಕುಲಕರ್ಣಿ, ಶೈಲಜ ಜೋಶಿ, ಅಶ್ವಿನಿ ವಾಮನಾಚಾರ್, ರಜನಿ ಕುಲಕರ್ಣಿ ಹಾಗೂ ಲಲಿತಾ ರಾವ್ ಭಾಗವಹಿಸಿದರು.

ಪ್ರಸನ್ನ ಹೆಗ್ಡೆ ನಿರೂಪಣೆ ಗೈದ ಸಭಾ ಕಾರ್ಯಕ್ರಮ ವೇದಿಕೆಯ ಮಹಿಳಾ ಗಣ್ಯರಿಂದ ದೀಪ ಪ್ರಜ್ವಲನೆ ಹಾಗೂ ಸ್ವರ ಕಲಾ ವೇದಿಕೆಯ ಕಾರ್ಯಾಧ್ಯಕ್ಷೆ ಶ್ರೀಮತಿ ಆಶಾನಾಯಕ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಂಘದ ಮಹಿಳಾಧ್ಯಕ್ಷೆ ಶ್ರೀಮತಿ ವೀಣಾ ಕಾಮತ್ ರವರು ಸಭಿಕರನ್ನು ಸ್ವಾಗತಿಸಿದರೆ, ಸಂಘದ ಪೂರ್ವ ಅಧ್ಯಕ್ಷೆ ದರ್ಶನ ಸೋನ್ಕರ್ ರವರು ಪ್ರಸ್ತಾವನೆ ಮಾಡಿದರು.

ಶ್ರೀಮತಿ ವೀಣಾ ನಾಯಕ್, ವಿಭಾ ದೇಶಮುಖ್, ಇಂದಿರಾ ಕುಲಕರ್ಣಿ, ಹಾಗೂ ಪ್ರಸನ್ನ ಹೆಗ್ಡೆ ಯವರು ಮುಖ್ಯ ಅತಿಥಿ, ಗೌರವ ಅತಿಥಿ ಹಾಗೂ ಸನ್ಮಾನಿತರನ್ನು ಪರಿಚಯಿಸಿದರು. ಶ್ರೀಮತಿ ವೀಣಾ ನಾಯಕ್ ರವರು ವಂದನಾರ್ಪಣೆ ಮಾಡಿದ ರಂಗು ರಂಗಿನ ಈ ಕಾರ್ಯಕ್ರಮ ರಾಷಗೀತೆಯೊಂದಿಗೆ ಮುಕ್ತಾಯವಾಯಿತು.



Related posts

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk

ದಾಸ ಸಾಹಿತ್ಯಕ್ಕೆ ಹರಿದಾಸರ ಕೊಡುಗೆ ಅನನ್ಯ: ಮಧುಸೂದನ್‌ ಟಿ.ಆರ್‌.

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾಗಾಂವ್ 35ನೇ ವಾರ್ಷಿಕ ಮಹಾಪೂಜೆ

Mumbai News Desk

ಮುಂಬೈ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶರುಣ್ ಭಾಸ್ಕರ ಕೋಟ್ಯಾನ್ ಗೆ ಶೇ.95.80 ಅಂಕ.

Mumbai News Desk

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ

Mumbai News Desk