April 1, 2025
Uncategorized

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸರಕಾರಕ್ಕೆ ಒತ್ತಾಯ


ಮಂಗಳೂರು ಮಾ.14 : ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ.
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆ ಶೇಕಡಾ 60 ಮಂದಿ ಬಡತನ ರೇಖೆಯಲ್ಲಿದ್ದು 30 ಶೇಕಡಾ ಮಧ್ಯಮ ವರ್ಗದಲ್ಲಿದ್ದು ಕೇವಲ 10 ಶೇಕಡಾ ಜನರು ಸಿರಿವಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಜಾತಿಯಾಗಿದ್ದು ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

ಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟ ( ರಿ ) ಮಂಗಳೂರು ತಿಳಿಸಿದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಹಕ್ಕೊತ್ತಾಯಕೆ ಸ್ಪಂದಿಸಿ ಶಾಸಕರಾದ ಸುನಿಲ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರು

Related posts

ಶ್ರೀ ಜೈನಜಟ್ಟಿಗೇಶ್ವರ ದೈವಸ್ಥಾನ . ಮೊಗವೀರಗರಡಿ ತಗ್ಗರ್ಸೆ. ಜನವರಿ 19ಮತ್ತು 20 ರಂದು ಗೆಂಡ ಸೇವೆ ಹಾಗೂ ಹಾಲುಹಬ್ಬ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧಿ ಸಂತೋಷ್ ಶೆಟ್ಟಿ ಗೆ ಶೇ 91.80 ಅಂಕ.

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಮಹಿಳಾ ವಿಭಾಗದ ವತಿಯಿಂದ ಹರಶಿನ ಕುಂಕುಮ ಕಾರ್ಯಕ್ರಮ

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ಮೆಂಡನ್ ಮೂಲಸ್ಥಾನ, ಮುಂಬಯಿ ಶಾಖೆ. ಜೂ 30,:  92ನೇ ವಾರ್ಷಿಕ ಮಹಾಸಭೆ

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk