30.5 C
Mumbai
June 8, 2026
Mumbai News Kannada
Uncategorized

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸರಕಾರಕ್ಕೆ ಒತ್ತಾಯ






ಮಂಗಳೂರು ಮಾ.14 : ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ.
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆ ಶೇಕಡಾ 60 ಮಂದಿ ಬಡತನ ರೇಖೆಯಲ್ಲಿದ್ದು 30 ಶೇಕಡಾ ಮಧ್ಯಮ ವರ್ಗದಲ್ಲಿದ್ದು ಕೇವಲ 10 ಶೇಕಡಾ ಜನರು ಸಿರಿವಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಜಾತಿಯಾಗಿದ್ದು ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

ಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟ ( ರಿ ) ಮಂಗಳೂರು ತಿಳಿಸಿದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಹಕ್ಕೊತ್ತಾಯಕೆ ಸ್ಪಂದಿಸಿ ಶಾಸಕರಾದ ಸುನಿಲ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರು



Related posts

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾ‌ರ್ ವಿಧಿವಶ,

Mumbai News Desk

Snapchat User Growth Disappoints in Another Down Quarter

admin

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಶ್ರೀಜಾ ಪ್ರಭಾಕರ ಶೆಟ್ಟಿ ಶೇ: 92.80

Mumbai News Desk

ಬಂಟರ ಸಂಘದಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ,

Mumbai News Desk

Precinct Data Shows Rich, White Neighborhoods Flipping Democratic in 2016. Will It Last?

admin