September 6, 2026
Mumbai News Kannada
Uncategorized

ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸರಕಾರಕ್ಕೆ ಒತ್ತಾಯ






ಮಂಗಳೂರು ಮಾ.14 : ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಒತ್ತಾಯಿಸಿದೆ.
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆ ಶೇಕಡಾ 60 ಮಂದಿ ಬಡತನ ರೇಖೆಯಲ್ಲಿದ್ದು 30 ಶೇಕಡಾ ಮಧ್ಯಮ ವರ್ಗದಲ್ಲಿದ್ದು ಕೇವಲ 10 ಶೇಕಡಾ ಜನರು ಸಿರಿವಂತರಾಗಿದ್ದಾರೆ. ಈ ಬಂಟ ಸಮುದಾಯ ಕಡಿಮೆ ಜನರು ಇರುವ ಒಂದು ವಿಶಿಷ್ಟ ಜಾತಿಯಾಗಿದ್ದು ತೀರ ಕೆಳಸ್ತರದ ಮಂದಿಯನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶ ನಮ್ಮದಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

ಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರಲು ಸರಕಾರದ ಸಂಪೂರ್ಣ ಸಹಾಯ ಇದ್ದಲ್ಲಿ ಮಾತ್ರ ಸಾಧ್ಯ. ಅದಕ್ಕಾಗಿ ಕರ್ನಾಟಕ ಘನ ಸರಕಾರ ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ ಮುಂದಿನ ದಿನಗಳಲ್ಲಿ ಬಡ ಬಂಟರ ಉನ್ನತೀಕರಣ ಮಾಡಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಹಕ್ಕೊತ್ತಾಯ ಮಾಡುತ್ತಿದೆ ಎಂದು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟ ( ರಿ ) ಮಂಗಳೂರು ತಿಳಿಸಿದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಹಕ್ಕೊತ್ತಾಯಕೆ ಸ್ಪಂದಿಸಿ ಶಾಸಕರಾದ ಸುನಿಲ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರು



Related posts

“ಜೆವಿಎಂ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಅಧ್ಯಕ್ಷ ಶ್ರೀ. ವಿ. ಎನ್. ಹೆಗ್ಡೆ ಅವರು ಶಿಕ್ಷಕರಿಗೆ ತಂತ್ರಜ್ಞಾನ ಪ್ರಾವಿಣ್ಯತೆ ಪಡೆಯಲು ಕರೆ.”

Mumbai News Desk

Grieving Orca Carries Dead Calf for More Than 3 Days: ‘She’s Just Not Letting Go’

admin

ಡಾ. ರಶ್ಮಾ ಎಂ. ಶೆಟ್ಟಿ ಗೆ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯಲ್ಲಿ ಪ್ರಥಮ ರನ್ನರ್ ಅಪ್ ಪ್ರಶಸ್ತಿ

Mumbai News Desk

After a Tax Crackdown, Apple Found a New Shelter for Its Profits

admin

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸನ್ನಿಧಿ ಹರೀಶ್ ಪೂಜಾರಿ ಗೆ ಶೇ.90.80 ಅಂಕ.

Mumbai News Desk

ವಿವಶ…

Mumbai News Desk