July 23, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್, ವಿಲೇಪಾರ್ಲೆ (ಪಶ್ಚಿಮ) ಶಾಖೆಯಿಂದ ದಶಮಾನೋತ್ಸವ ಆಚರಣೆ.







ಭಾರತ್ ಬ್ಯಾಂಕಿನ ವಿಲೇಪಾರ್ಲೆ (ಪಶ್ಚಿಮ) ಶಾಖೆಯು ತನ್ನ ಗ್ರಾಹಕರ ಸೇವೆಯ 10ನೇ ವರ್ಷವನ್ನು ಇತ್ತೀಚೆಗೆ ಆಚರಿಸಿದೆ.
ಬ್ಯಾಂಕಿನ ನಿರ್ದೇಶಕರಾದ ಸುರೇಶ್ ಬಿ. ಸುವರ್ಣ ದೀಪ ಬೆಳಗಿಸಿ ಉದ್ಘಾಟಿಸಿ, ಕಳೆದ ಹತ್ತು ವರ್ಷದಲ್ಲಿನ ಶಾಖೆಯ ಪ್ರಯಾಣವನ್ನು ಶ್ಲಾಘಿಸಿದರು.
ಬ್ಯಾಂಕಿನ ಗ್ರಾಹಕರು, ಶಾಖೆಯ ಸಿಬ್ಬಂದಿ ವರ್ಗದವರು ಹಾಗೂ ಹಿತೈಷಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಬ್ಯಾಂಕಿನ ಹಾಗೂ ಶಾಖೆಯ ಹಿರಿಯ ಗ್ರಾಹಕರಾದ ಮನೀಷಾ ಭಟ್ಟಾಚಾರ್ಜಿ ಮತ್ತು ಹಿತೇನ್ ಥಕ್ಕರ್, ಬ್ಯಾಂಕಿನ ನಿರ್ದೇಶಕ ಸುರೇಶ್ ಬಿ. ಸುವರ್ಣ, ಶಾಖಾ ಪ್ರಭಂದಕಿ ಸರೋಜಾ ಸುವರ್ಣ ಮತ್ತು ಇತರ ಗಣ್ಯರು ಅತಿಥಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ದಶಮಾನೋತ್ಸವವನ್ನು ಆಚರಿಸಿದರು.
ಶಾಖೆಯ ಉಪ ಪ್ರಭಂದಕಿ ದಕ್ಷಾ ಘಗಡ ಮತ್ತು ಸಿಬ್ಬಂದಿ ವರ್ಗದವರಾದ ಕಿರಣ್ ಸಂಗೋಯ್, ನಿಧಿ ಮಹಾದ್ದಾಲ್ಕರ್, ಧೀರಜ್ ಕೋಟ್ಯಾನ್ ಮತ್ತು ಪ್ರಣಾಲಿ ರಾವ್, ಸಹಾಯಕ ಸಿಬ್ಬಂದಿ ಆನಂದ್ ಗಾವ್ಡೆ ಮತ್ತು ಭದ್ರತಾ ಸಿಬ್ಬಂದಿ ರಾಮಚಂದ್ರ ಗಾಯಕ್ವಾಡ್ ಸೇರಿದಂತೆ ಶಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹತ್ತನೆಯ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಸಹಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಖಾ ಪ್ರಭಂದಕಿ ಸರೋಜಾ ಸುವರ್ಣ, ಗ್ರಾಹಕರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. “ನಮ್ಮ ಬ್ಯಾಂಕಿನ ಎಲ್ಲಾ ಗ್ರಾಹಕರಿಗೆ ತೃಪ್ತಿಕರ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವಲ್ಲಿ ನಾವು ಬದ್ಧರಾಗಿದ್ದೇವೆ. ಗ್ರಾಹಕರು ಮತ್ತು ಸಿಬ್ಬಂದಿಗಳ ಬ್ಯಾಂಕಿನ ಪ್ರಯಾಣವನ್ನು ನೆನಪಿಸಿಕೊಳ್ಳುತ್ತಾ ನಮ್ಮ ಗ್ರಾಹಕರೊಂದಿಗೆ ನಿರಂತರ ಸುದೀರ್ಘ್ಹ ಹಾಗೂ ತೃಪ್ತಿಕರ ಸೇವೆ ಇನ್ನೂ ಉನ್ನತ ಮಟ್ಟದಲ್ಲಿ ನೀಡುತ್ತೇವೆ ಎಂದು ನುಡಿದರು,
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಮತ್ತು ಉಪಕಾರ್ಯಧ್ಯಕ್ಷ ನ್ಯಾಯವಾದಿ ಸೋಮನಾಥ ಅಮೀನ್ ಹಾಗೂ ನಿರ್ದೇಶಕರು ಶುಭಾಶಯಗಳು ತಿಳಿಸಿರುವರು.



Related posts

ದಹಿಸರ್ ಶ್ರೀ ಕಾಶೀಮಠದಲ್ಲಿ ಕೊಂಕಣಿಯಲ್ಲಿ ಯಕ್ಷಗಾನ

Mumbai News Desk

ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಅಧ್ಯಕ್ಷರಾಗಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್

Mumbai News Desk

ಜಿ.ಎಸ್.ಬಿ.ಎಸ್. ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ, ಮಾಹಿಮ್ ಘಟಕದ ವಿಸ್ತರಣೆಯ ಉದ್ಘಾಟನೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಕಾರ್ಯಕ್ರಮ.

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk