32 C
Mumbai
March 7, 2026
Mumbai News Kannada
ಪ್ರಕಟಣೆ

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ





ನಾಯ್ಗoವ್- ವಸಯಿ – ನಾಲಾಸೋಪಾರ-ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ, ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಮಾರ್ಚ್ 16, ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ವಸಯಿ ಪಶ್ಚಿಮ, ವಸಯಿ ಕರ್ನಾಟಕ ಸಂಘದ ಹತ್ತಿರದ, ಸ್ವಾಮಿ ನಾರಾಯಣ ಮಂದಿರದ ಎರಡನೇ ಅಂತಸ್ತಿನ ಸಭಾಗ್ರಹದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಯಶೋದರ ವಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಂಘಟಕಿ ಬ್ಯಾಕ್ವರ್ಡ್ ಅಲ್ ಡೇ ದಿನರ್ ನ ಸಹಾ ಸ್ಥಾಪಕಿ ಸುಚಿತ್ರ ಎಸ್ ಪುತ್ರನ್, ಗಾಯತ್ರಿ ಪರಿವಾರದ ಸಂಚಾಲಕರಾದ ಜಯಲಕ್ಷ್ಮಿ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು.
ಈ ಸಂದರ್ಭ ಸಂಘದ ಹಿರಿಯ ಸಕ್ರಿಯ ಸದಸ್ಯೆ ಸರೋಜಿನಿ ಜೆ ಕರ್ಕೇರ ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಭಜನೆ ಸ್ಪರ್ಧೆ, ಹಳದಿ ಕುಂಕುಮ ಪ್ರಸ್ತುತಗೊಳ್ಳಲಿದೆ.
ಸಂಘದ ಅಧ್ಯಕ್ಷರಾದ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷರಾದ ದಯಾನಂದ್ ಕುಂದರ್, ಕಾರ್ಯದರ್ಶಿ ಶೇಕರ್ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ್ ಬಂಗೇರ, ಸಲಹೆಗಾರ ಮೋಹನ್ ಪುತ್ರನ್, ಸಂಚಾಲಕರಾದ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ
ಕಾರ್ಯಧ್ಯಕ್ಷ ಪ್ರತಿಕ್ ಶ್ರೀಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೇ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರರಾದ ಮೋಹಿನಿ ಮಲ್ಪೆ ಹಾಗೂ ಟ್ರಸ್ಟಿಗಳು, ಸರ್ವ ಸದಸ್ಯರು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಜುಲೈ.20ಕ್ಕೆ ಆಟಿಡೊಂಜಿ ದಿನ

Mumbai News Desk

ಸೆ 1 ರಂದು ಶ್ರೀಕೃಷ್ಣ ವಿಠಲ ಪ್ರತಿಷ್ಠಾನ, ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ .

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ‌ ಸ್ಥಳೀಯ ಕಚೇರಿ:ಸೆ.13 ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಫೆ. 21-22ರಂದು “148ನೇ ವಾರ್ಷಿಕ ಮಂಗಳೋತ್ಸವ” ಮತ್ತು “ಕುಮಾರವ್ಯಾಸ ಭಾರತ” ಗ್ರಂಥ ಪಾರಾಯಣದ ಸಮಾಪ್ತಿ ಮಂಗಳೋತ್ಸವ, 24ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk