30.9 C
Mumbai
June 8, 2026
Mumbai News Kannada
ತುಳುನಾಡು

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;





ಸಿಂಹದ ರೂಪದಲ್ಲಿ ಬಂದ ಮಾತೆ ಭಗವತಿಯ ಅಪ್ಪಣೆಯನ್ನು ಪೂರೈಸುವ ಪ್ರಯತ್ನ ಮಾಡಿದ್ದೆನೆ – ಕೃಷ್ಣ ಎನ್ ಉಚ್ಚಿಲ್

ವರದಿ : ಈಶ್ವರ ಎಂ. ಐಲ್

ಮಂಗಳೂರು : ಹದಿನೈದು ವರ್ಷಗಳ ಹಿಂದೆ ಕಂಡ ಕನಸು. ಕನಸಲ್ಲಿ ಸಿಂಹದ ರೂಪದಲ್ಲಿ ಬಂದ ಮಾತೆ ಭಗವತೀ ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ, ಸುಮಾರು ೬೦೦ ವರ್ಷಗಳ ಹಿಂದೆ ಅನ್ಯರ ದಾಳಿಯಿಂದಾಗಿ ಸಂಪೂರ್ಣ ನಾಶ ಹೊಂದಿದ್ದ ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಜೀರ್ಣೋದ್ದಾರವನ್ನು ಎಷ್ಟೇ ಕಷ್ಟ ನಷ್ಟ ಬಂದರೂ ಮಾತೆಯ ಆಪ್ಪಣೆ ಯಂತೆ ಮುಂದಿಟ್ಟ ಕಾಲನ್ನು ಹಿಂದಿಡದೆ ಜಾತಿ ಬಾಂಧವರ ಹಾಗೂ ಊರಿನ ಎಲ್ಲಾ ಭಕ್ತಾಭಿಮಾನಿಗಳ ಸಹಾಯದಿಂದ ಮಾತೆಯ ಆಶೀರ್ವಾದದಿಂದ ಜೀರ್ಣೋದ್ದಾರ ಮಾಡಿದ್ದೇವೆ ಎಂದು ಮುಂಬಯಿಯ ಉದ್ಯಮಿ, ಕ್ಷೇತ್ರದ ಅಧ್ಯಕ್ಷರೂ ಆದ ಕೃಷ್ಣ ಎನ್ ಉಚ್ಚಿಲ್ ನುಡಿದರು.   

ಬಂಟ್ವಾಳ ತಾಲೂಕು ಅಳಿಕೆ ಸಮೀಪ ಸಿಂಹಮೂಲೆ ಎರುಂಬು ಎಂಬಲ್ಲಿನ  ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಸಂಪೂರ್ಣ ಜೀರ್ಣೊದ್ದಾರ ಮಾಡಿ ಮಾ. 16ರಂದು ಜರಗಿದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ  ಅವರು ಈ ಕ್ಷೇತ್ರದ ಜೀರ್ಣೋದ್ದಾರದ ಬಗ್ಗೆ ನನಗೆ ಸಿಕ್ಕಿದ ಎಲ್ಲಾ  ಗೌರವ ಸನ್ಮಾನವನ್ನು ಕಳದ ಹದಿನೈದು ವರ್ಷಗಳಿಂದ ಕ್ಷೇತ್ರದ ಜೋರ್ಣೋದ್ದಾರಕ್ಕಾಗಿ ರಾತ್ರಿ ಹಗಲೆನ್ನದೆ ದುಡಿದ ಎಲ್ಲರಿಗೂ ಅರ್ಪಿಸುತ್ತಿರುವೆನು ಎಂದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ ಅವರು ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಕಡೆಮೆಯಾಗಿದ್ದು ತುಳಸಿಯಂತೆ ದೇವರಿಗೆ ಹತ್ತಿರವಾಗುರುವ ಕೃಷ್ಣ ಎನ್ ಉಚ್ಚಿಲ್ ಅವರು ಭಗವತಿಯ ಅಪ್ಪಣೆಯಂತೆ ಸಮಾಜಕ್ಕೆ ಅರ್ಪಿಸಿದ್ದು ನಮ್ಮೆಲ್ಲರ ಸೌಭಾಗ್ಯ ಎಂದರು.

ಡಾ. ಜಿ. ಪಿ. ಮೊಗಶಾಲೆಯವರು ಧಾರ್ಮಿಕ ಉಪನ್ಯಾಸ ನೀಡಿದರು.

ತೀಯಾ ಸಮಾಜ ಮುಂಬಯಿಯ ಟ್ರಷ್ಟಿ ಡಾ. ದಯಾನಂದ ಕುಂಬ್ಳೆ, ಸಮಾಜದ ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಮುಂಬಯಿಯ ಸಿ.ಎ. ರಾಧೇಶ್ ನಾಯರ್ ಮೊದಲಾದವರು ಮಾತನಾಡಿದರು.

ವೇದಿಕೆಯಲ್ಲಿ ಜಗಜೀವನ್ ರಾಮ್ ಶೆಟ್ಟಿ,  ಯತೀಂದ್ರನಾಥ ಪುತ್ತೂರು, ಮಲೈಕಾ ಗ್ರೂಪಿನ  ಇರ್ದೇಶಕ ಸುಶಾಂತ್, ಮುಂಬಯಿಂದ ಆಗಮಿಸಿದ ಸಮಾಜ ಸೇವಕ ತಿಮ್ಮಪ್ಪ ಬಂಗೇರ, ತೀಯಾ ಸಮಾಜದ ಮಾಜಿ ಕೋಶಾಧಿಕಾರಿ ರಮೇಶ್ ಉಳ್ಳಾಲ್, ಪದ್ಮನಾಭ ಕರ್ಕೇರ, ಚಂದ್ರಿಕಾ ಕೃಷ್ಣ ಉಚ್ಚಿಲ್, ತೀಯಾ ಸಮಾಜದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾಲತಾ ಉಳ್ಳಾಲ್, ಶಶಿಪ್ರಭಾ ಬಂಗೇರ, ಸವಿತಾ ಶೆಟ್ಟಿ, ಸರಸ್ವತಿ ಬಜ್ಪೆ, ತೀಯಾ ಸಮಾಜ ದುಬಾಯಿಯ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ರಕರ್ತ ಈಶ್ವರ ಎಂ. ಐಲ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ವಿವಿಧ ಕ್ಷೆತ್ರದಲ್ಲಿ ಸಾಧನೆಗೈದ ಸಾಧರಗನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ದೇವಸ್ಥಾನದ ಸಮಿತಿಯ  ಉಪಾಧ್ಯಕ್ಷರುಗಳಾದ ಡಾ. ಗಂಗಾಧರ ಬನಾರಿ, ಶ್ರೀಧರ ಅಳಿಕೆ ಎಂ. ಎ., ಜಯಂತಿ ಸತೀಶ್ ಉಕ್ಕುಡ, ಪ್ರಧಾನ ಕಾರ್ಯದರ್ಶಿ  ನ್ಯಾ. ಮೋನಪ್ಪ ಎಂ., ಕೋಶಾಧಿಕಾರಿ ಚಂದ್ರಶೇಖರ ಮಡಿಯಾಲ, ಕಾರ್ಯದರ್ಶಿಗಳಾದ ನವೀನ್ ಕನತ್ತಡ್ಕ, ಸವಿತಾ ಚಂದ್ರಶೇಖರ್, ಶರತ್ ಚಂದ್ರ ಮಡಿಯಾಲ, ಬ್ರಹ್ಮಕಲಸೋತ್ಸವ ಗೌರವಾಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳೂ, ಗೌರವ ಸಲಹೆಗಾರರು, ಯುವಜನ ಸಂಘ, ಮಾತೃ ಮಂಡಳಿ, ಭಜನಾ ಮಂಡಳಿ, ತೀಯಾ ಲಿಟಲ್ ಟೈಗರ್ಸ್ ಹಾಗೂ ಇತರ ಸದಸ್ಯರು ಉಪಸ್ಥಿತಿತರಿದ್ದು ಸಹಕರಿಸಿದರು. 

ಬ್ರಹ್ಮಕಲಶ ಸಮಾರಂಭದಲ್ಲಿ ತೀಯಾ ಸಮಾಜ ಮುಂಬಯಿಯ ಸದಸ್ಯರುಗಳು ನೂರಾರು ಸಂಖ್ಯೆಯಲ್ಲಿ ಬಾಗವಹಿಸಿದರು. ಕರಾವಳಿಯ ಎಲ್ಲಾ ಅದಿನೆಂಟು ಭಗವತೀ ಕ್ಷೆತ್ರಗಳ ಸಮಿತಿಯ ಸದಸ್ಯರು, ಆಚಾರಪಟ್ಟವರು ಹಾಗೂ ಭಕ್ತಾಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು: ಮೂರನೇ ಸ್ಥನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಮೂಲ್ಕಿ : ಹರಿಶ್ಚಂದ್ರ ಸಾಲ್ಯಾನ್ ಅವರ 23ನೇ ಕೃತಿ ‘ನುಡಿಮುತ್ತು’ ಬಿಡುಗಡೆ ಕಾರ್ಯಕ್ರಮ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಮೂಲ್ಕಿ : ಆಗಸ್ಟ್ 17ರಂದು ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಮೂಲ್ಕಿಯಲ್ಲಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2026: ಕಲಾವಿದರ ಪಾಲ್ಗೊಳ್ಳುವಿಕೆ ಮುಖ್ಯ – ಗುರುಕಿರಣ್

Mumbai News Desk