29 C
Mumbai
March 7, 2026
Mumbai News Kannada
ಸುದ್ದಿ

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.






ಮುಲ್ಕಿ. ಮಾ. 18:ಮುಲ್ಕಿ ಶ್ರೀಕ್ಷೇತ್ರ ಬಪ್ಪನಾಡಿನ ಅನುವಂಶೀಯ ಮೊಕ್ತೇಸರರಾದ ಕಕ್ವಗುತ್ತು ಎಸ್. ಎಸ್. ಮನೋಹರ ಶೆಟ್ಟಿ(87)ರವರು ಅನಾರೋಗ್ಯದಿಂದ ಮಾ. 19ರಂದು ನಿಧನರಾಗಿದ್ದಾರೆ.
ಶೆಟ್ಟಿಯವರು ವಿಜಯಾ ಬ್ಯಾಂಕಿನಲ್ಲಿ ಪ್ರಭಂದಕರಾಗಿದ್ದು ಸಮಾಜ ಸೇವೆಯೊಂದಿಗೆ ನಿವೃತ್ತ ಜೀವನ ನಡೆಸುತ್ತಿದ್ದರು.ಮುಲ್ಕಿ ಸುಂದರ ರಾಮ ಶೆಟ್ಟಿ ಟ್ರಸ್ಟಿನ ಗೌರವ ಸಲಹೆಗಾರರಾಗಿ,ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ 1996ರಿಂದ ಸೇವೆ ಸಲ್ಲಿಸುತ್ತಿದ್ದು ದೇವಸ್ಥಾನದ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದರು. ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯಲ್ಲೂ ಗೌರವಾದ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಲ್ಕಿ ಕಕ್ವಗುತ್ತಿನ ಅನುವಂಶೀಯ ಮೊಕ್ತೇಸರರಾದ ದಿ.ಕಾಳಪ್ಪ ಶೆಟ್ಟಿಯವರ ಕುಟುಂಬಿಕರಾದ ಇವರು ಶ್ರೀ ಕ್ಷೇತ್ರ ಬಪ್ಪನಾಡಿನಲ್ಲಿ 29 ವರ್ಷ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಜನಾನುರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.



Related posts

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ

Mumbai News Desk