September 6, 2026
Mumbai News Kannada
ಕರ್ನಾಟಕ

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ






ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ವಸ್ತುಗಳ ಬೆಲೆ ಹೆಚ್ಚಾಗುತ್ತಲೇ ಇವೆ. ಆರಂಭದಲ್ಲಿ ಮಧ್ಯದ ಬೆಲೆ ನಂತರ ಸಾರಿಗೆ ಬಸ್ ಪ್ರಯಾಣ, ಹಾಲಿನ ದರ, ನಮ್ಮ ಮೆಟ್ರೋ ದರ ಇದೀಗ ವಿದ್ಯುತ್ ದರ ಹೆಚ್ಚಳ ಮಾಡಿ ಜನರಿಗೆ ಮತ್ತೆ ಶಾಕ್ ನೀಡಿದೆ.
ಕೆಇಆರ್ಸಿ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿದ್ದು, ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ಸರಕಾರವು ಗ್ರಹ ಜ್ಯೋತಿ ಯೋಜನೆಯ ಮೂಲಕ 200 ಯುನಿಟ್ ವಿದ್ಯುತ್ ಉಚಿತ ಕೊಟ್ಟಿದ್ದು, 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ.

ಕರ್ನಾಟಕ ಸರ್ಕಾರವು ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನೌಕರರು, ಸಿಬ್ಬಂದಿಗೆ ವೇತನ, ಪಿಂಚಣಿ, ಗ್ರಾಚುಟಿಗೆ ಹಣ ಹೊಂದಿಸಲು ದರ ಹೆಚ್ಚಿಸಿ ಜನರಿಂದ ಹಣ ವಸೂಲಿಗೆ ಮುಂದಾಗಿದೆ ಎಂದು ಸಾರ್ವಜನಿಕರು, ವಿಪಕ್ಷ ನಾಯಕರು ದೂರಿದ್ದಾರೆ.
ರಾಜ್ಯ ಸರ್ಕಾರ ಒಂದು ಕಡೆ ಉಚಿತ ಕರೆಂಟ್ ನೀಡುವುದಾಗಿ ಘೋಷಿಸಿದೆ ಮತ್ತೊಂದು ಕಡೆ ರಾಜ್ಯ ಲೋಕಾಪಯೋಗಿ ಇಲಾಖೆ ಬರೋಬ್ಬರಿ 8000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ, ಹೀಗಾಗಿಯೇ ಸರಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರಿಗೆ ದರ ಏರಿಕೆ ಬರ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸರಕಾರದ ವಿರುದ್ಧ ಕಿಡಿ ಕಾರಿದರು.



Related posts

ಕರಾವಳಿ,‌ ಮಲೆನಾಡು ಭಾಗಕ್ಕೆ ‌ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್

Mumbai News Desk

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

Mumbai News Desk

ಮಂಗಳೂರು : ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk