32 C
Mumbai
March 7, 2026
Mumbai News Kannada
ಸುದ್ದಿ

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.





ಮುಂಬಯಿ : ಕಾನೂನು ಕ್ಷೇತ್ರದಲ್ಲಿ ಹೊಸ ದಾಖಲೆಯನ್ನು ಮಡಿದ ET ಗ್ಲೋಬಲ್ ಲೀಗಲ್ ಅವಾರ್ಡ್ಸ್ 2025 ರ “ವರ್ಷದ ವ್ಯವಸ್ಥಾಪಕಿ ಪಾಲುದಾರ – ಮಹಿಳೆ” ಪ್ರಶಸ್ತಿಯನ್ನು ಮಹಾನಗರದ ಅಂಧೇರಿ ಪೂರ್ವದ ಖ್ಯಾತ ವಕೀಲೆ ಕನ್ನಡತಿ ನ್ಯಾ. ಮೀನಾಕ್ಷಿ ಪದ್ಮನಾಭ ಅಚಾರ್ಯ ಪಡೆದಿದ್ದಾರೆ.

ಮಾರ್ಚ್ 5, 2025 ರಂದು ಮುಂಬಯಿಯಲ್ಲಿ ನಡೆದ ET ಗ್ಲೋಬಲ್ ಲೀಗಲ್ ಕನ್ವೆನ್ಷನ್ 2025 ರಲ್ಲಿ ಈ ಪ್ರಶಸ್ತಿಯನ್ನು ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ಎನ್. ಸಾಯಿಕೃಷ್ಣ ಅವರು ಪ್ರಧಾನಿಸಿದರು.

ಕಾನೂನು ಕ್ಷೇತ್ರದಲ್ಲಿ 20 ವರ್ಷಕ್ಕಿಂತಲೂ ಅಧಿಕ ಕಾಲದ ಅನುಭವವನ್ನು ಪಡೆದಿರುವ ನ್ಯಾ. ಮೀನಾಕ್ಷಿ ಅಚಾರ್ಯ ಅವರು ಈಗಾಗಲೇ ಪ್ರತಿಷ್ಠಿತ ಪೋರ್ಬಸ್ ಇಂಡಿಯಾ ಸೇರಿ ಹಲವಾರು ಉನ್ನತ ಮಟ್ಟದ ಪ್ರಶಸ್ತಿ, ಪುರಸ್ಕಾರ ಹಾಗೂ ಸನ್ಮಾನಗಳನ್ನು ದೇಶ ವಿದೇಶಗಳಲ್ಲೂ ಪಡೆದಿದ್ದು ಕಳೆದ ಸುಮಾರು 15 ವರ್ಷಗಳಿಂದ ಮುಂಬಯಿಯ ಅಂಧೇರಿ ಪೂರ್ವದ ಸಹರ್ ನಲ್ಲಿ ಅರ್.ಎಮ್. ಎ. ಲೀಗಲ್ ನ ವ್ಯವಸ್ಥಾಪಕ ಪಾಲುದಾರರಾಗಿದ್ದಾರೆ. ಇವರ ಸಂಸ್ಥೆಯು ದೆಹಲಿ, ಬೆಂಗಳೂರು, ಪುಣೆ, ಹೈದರಾಬಾದ್, ಚಿನ್ನೈ, ಮತ್ತು ಯುನೈಟೆಡ್ ಕಿಂಗ್ ಡಂನಲ್ಲಿ ಖಚೇರಿಯನ್ನು ಹೊಂದಿದೆ. ವಿಲೀನತೆ, ಸ್ವಾಧೀನತೆ, ಖಾಸಗಿ ಷೇರುಗಳು ಮತ್ತು ಹೂಡಿಕೆಗಳು, ವಿದೇಶಿ ಹೂಡಿಕೆ ನೀತಿಗಳು, ಕಾರ್ಪೊರೇಟ್ ಮತ್ತು ವಾಣಿಜ್ಯ ವಹಿವಾಟುಗಳು, ಬಂಡವಾಳ ಮಾರುಕಟ್ಟೆ, ಇ-ವಾಣಿಜ್ಯ, ರಿಯಲ್ ಎಸ್ಟೇಟ್, ಮೂಲಸೌಕರ್ಯ, ಉದ್ಯೋಗ ಮತ್ತು ಕಾರ್ಮಿಕ ವಿಷಯಗಳಲ್ಲಿ ಇವರು ಪರಿಣಿತರು.

ಬಂಟ್ವಾಳ ತಾಲೂಕಿನ ಕುರಿಯಾಲ ಗ್ರಾಮ
ಸೀತಾರಾಮ ಬಾಬು ಆಚಾರ್ಯ ಮತ್ತು ಶೋಭಾ ಸೀತಾರಾಮ ಆಚಾರ್ಯ ದಂಪತಿಯ ಸುಪುತ್ರಿಯಾದ ಇವರು ಮೂಡಬಿದ್ರೆಯ ಇರುವೆಲ್ ನ ಪದ್ಮನಾಭ ರಾಮಣ್ಣ ಆಚಾರ್ಯ ಅವರ ಪತಿ.
ಪುತ್ರ ಧ್ರುವ ಆಚಾರ್ಯ ಬೆಂಗಳೂರಿನಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದಾರೆ.
ಇವರನ್ನು ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಜೈ ಶ್ರೀ ವಿಶ್ವಕರ್ಮ ಭಜನಾ ಸಂಘ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯು ಸನ್ಮಾನಿಸಿದೆ.



Related posts

ಬೊಯಿಸರ್ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಸಾರ್ವಜನಿಕ ಆಶ್ಲೇಷಾ ಪೂಜೆ , ದುರ್ಗಾ ಪೂಜೆ , ಶನಿಪೂಜೆ ಸಂಪನ್ನ

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

Mumbai News Desk

ಅರಬ್ಬಿ ಸಮುದ್ರದ ಅಲೆಗಳನ್ನು ಗೆದ್ದ ಮುಂಬೈ ಹುಡುಗಿ: 5 ಕಿ.ಮೀ ಈಜಿ ದಾಖಲೆ ಬರೆದ ದಿಶಿತಾ ಚಂದ್ರಶೇಖರ್ ಪೂಜಾರಿ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk