34.2 C
Karnataka
March 29, 2025
ಸುದ್ದಿ

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

ಭಾರತೀಯ ರೈಲ್ವೆ, ಮುಂಬೈ ಮತ್ತು ಮಂಗಳೂರನ್ನು ನೇರವಾಗಿ ಸಂಪರ್ಕಿಸುವ ಹೊಸ ವಂದೇ ಭಾರತ್ ರೈಲನ್ನು ಪರಿಚಯಿಸಲು ತಯಾರಾಗಿದೆ. ಈಗ ಅಸ್ತಿತ್ವದಲ್ಲಿರುವ ಮುಂಬೈ – ಗೋವಾ ಮತ್ತು ಮಂಗಳೂರು – ಗೋವಾ ಒಂದೇ ಭಾರತ್ ಮಾರ್ಗವನ್ನು ವಿಲೀನಗೊಳಿಸುವ ಯೋಜನೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣದ ಸಮಯವನ್ನು ಕಡಿಮೆಮಾಡಲಿದೆ.
ಪ್ರಸ್ತುತ ಮುಂಬೈ ಗೋವಾ ವಂದೇ ಭಾರತ್ ರೈಲು ಮುಂಬೈಯಿಂದ ಬೆಳಗ್ಗೆ 5:25ಕ್ಕೆ ಹೊರಟು ಮಧ್ಯಾಹ್ನ 1.10ಕ್ಕೆ ಗೋವಾ ತಲುಪುತ್ತದೆ. ಹೊಸ ಯೋಜನೆ ಅಡಿಯಲ್ಲಿ ರೈಲು ಮುಂದುವರಿದು ಸಂಜೆ 6 ಗಂಟೆಗೆ ಮಂಗಳೂರು ತಲಪಲಿದೆ. ಅದೇ ರೀತಿ ಪ್ರಸ್ತುತ ಬೆಳಿಗ್ಗೆ 8:30 ಕ್ಕೆ ಹೊರಟು 1.10ಕ್ಕೆ ಗೋವಾ ತಲುಪುವ ಮಂಗಳೂರು- ಗೋವಾ ವಂದೇ ಭಾರತ್ ರೈಲು ಮುಂಬೈಗೆ ವಿಸ್ತರಿಸಲ್ಪಟ್ಟು ರಾತ್ರಿ 9ರ ತನಕ ಮುಂಬೈ ತಲುಪುತ್ತದೆ.
ಈ ಮಾರ್ಗ ವಿಸ್ತರಣೆಗೆ ಒಂದು ಪ್ರಮುಖ ಕಾರಣವೆಂದರೆ ಮಂಗಳೂರು – ಗೋವಾ ವಂದೇ ಭಾರತ್ ರೈಲು ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದು, ವರದಿಗಳ ಪ್ರಕಾರ ಪ್ರಯಾಣಿಕರ ಸಂಖ್ಯೆ ಶೇಕಡ 40ಕ್ಕಿಂತ ಕಡಿಮೆ ಇದ್ದು, ಇದು ಅತ್ಯಂತ ಕಡಿಮೆ ಬಳಕೆಯಲ್ಲಿರುವ ವಂದೇ ಭಾರತ್ ಸೇವೆಗಳಲ್ಲಿ ಒಂದಾಗಿದೆ.
ಈ ಯೋಜನೆಯಡಿ ವಂದೇ ಭಾರತ್ ಎಕ್ಸ್ಪ್ರೆಸ್ ಆರಂಭವಾದರೆ, ಪ್ರಯಾಣಕರು ಕೇವಲ 12 ಗಂಟೆಗಳಲ್ಲಿ ಮುಂಬೈ ಅಥವಾ ಮಂಗಳೂರು ತಲುಪಬಹುದು.
ಈ ಪ್ರಾಸ್ತಾವಿತ ವಿಸ್ತರಣೆಯು ಯಶಸ್ವಿಯಾದರೆ ಮುಂಬೈ- ಮಂಗಳೂರು ವಂದೇ ಭಾರತ್ ಕೊಂಕಣ ಕರಾವಳಿಯ ಪ್ರಯಾಣಿಕರಿಗೆ ವೇಗವಾದ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣದ ಆಯ್ಕೆಯನ್ನು ಒದಗಿಸಬಹುದು. ಅದಾಗ್ಯೂ, ವಿಸ್ತೃತ ಮಾರ್ಗವು ಹೆಚ್ಚಿನ ಜನದಟ್ಟಣೆಯನ್ನು ಉಳಿಸಬಹುದೇ, ಮತ್ತು ಕಾರ್ಯಚರಣೆಯ ಅಡೆತಡೆಗಳನ್ನು ತಪ್ಪಿಸಬಹುದೇ ಎಂಬುದು ನಿಜವಾದ ಪರೀಕ್ಷೆಯಾಗಿದೆ.

Related posts

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

Mumbai News Desk