30.5 C
Mumbai
June 8, 2026
Mumbai News Kannada
ಸುದ್ದಿ

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ





ಭಾರತೀಯ ರೈಲ್ವೆ, ಮುಂಬೈ ಮತ್ತು ಮಂಗಳೂರನ್ನು ನೇರವಾಗಿ ಸಂಪರ್ಕಿಸುವ ಹೊಸ ವಂದೇ ಭಾರತ್ ರೈಲನ್ನು ಪರಿಚಯಿಸಲು ತಯಾರಾಗಿದೆ. ಈಗ ಅಸ್ತಿತ್ವದಲ್ಲಿರುವ ಮುಂಬೈ – ಗೋವಾ ಮತ್ತು ಮಂಗಳೂರು – ಗೋವಾ ಒಂದೇ ಭಾರತ್ ಮಾರ್ಗವನ್ನು ವಿಲೀನಗೊಳಿಸುವ ಯೋಜನೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣದ ಸಮಯವನ್ನು ಕಡಿಮೆಮಾಡಲಿದೆ.
ಪ್ರಸ್ತುತ ಮುಂಬೈ ಗೋವಾ ವಂದೇ ಭಾರತ್ ರೈಲು ಮುಂಬೈಯಿಂದ ಬೆಳಗ್ಗೆ 5:25ಕ್ಕೆ ಹೊರಟು ಮಧ್ಯಾಹ್ನ 1.10ಕ್ಕೆ ಗೋವಾ ತಲುಪುತ್ತದೆ. ಹೊಸ ಯೋಜನೆ ಅಡಿಯಲ್ಲಿ ರೈಲು ಮುಂದುವರಿದು ಸಂಜೆ 6 ಗಂಟೆಗೆ ಮಂಗಳೂರು ತಲಪಲಿದೆ. ಅದೇ ರೀತಿ ಪ್ರಸ್ತುತ ಬೆಳಿಗ್ಗೆ 8:30 ಕ್ಕೆ ಹೊರಟು 1.10ಕ್ಕೆ ಗೋವಾ ತಲುಪುವ ಮಂಗಳೂರು- ಗೋವಾ ವಂದೇ ಭಾರತ್ ರೈಲು ಮುಂಬೈಗೆ ವಿಸ್ತರಿಸಲ್ಪಟ್ಟು ರಾತ್ರಿ 9ರ ತನಕ ಮುಂಬೈ ತಲುಪುತ್ತದೆ.
ಈ ಮಾರ್ಗ ವಿಸ್ತರಣೆಗೆ ಒಂದು ಪ್ರಮುಖ ಕಾರಣವೆಂದರೆ ಮಂಗಳೂರು – ಗೋವಾ ವಂದೇ ಭಾರತ್ ರೈಲು ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದು, ವರದಿಗಳ ಪ್ರಕಾರ ಪ್ರಯಾಣಿಕರ ಸಂಖ್ಯೆ ಶೇಕಡ 40ಕ್ಕಿಂತ ಕಡಿಮೆ ಇದ್ದು, ಇದು ಅತ್ಯಂತ ಕಡಿಮೆ ಬಳಕೆಯಲ್ಲಿರುವ ವಂದೇ ಭಾರತ್ ಸೇವೆಗಳಲ್ಲಿ ಒಂದಾಗಿದೆ.
ಈ ಯೋಜನೆಯಡಿ ವಂದೇ ಭಾರತ್ ಎಕ್ಸ್ಪ್ರೆಸ್ ಆರಂಭವಾದರೆ, ಪ್ರಯಾಣಕರು ಕೇವಲ 12 ಗಂಟೆಗಳಲ್ಲಿ ಮುಂಬೈ ಅಥವಾ ಮಂಗಳೂರು ತಲುಪಬಹುದು.
ಈ ಪ್ರಾಸ್ತಾವಿತ ವಿಸ್ತರಣೆಯು ಯಶಸ್ವಿಯಾದರೆ ಮುಂಬೈ- ಮಂಗಳೂರು ವಂದೇ ಭಾರತ್ ಕೊಂಕಣ ಕರಾವಳಿಯ ಪ್ರಯಾಣಿಕರಿಗೆ ವೇಗವಾದ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣದ ಆಯ್ಕೆಯನ್ನು ಒದಗಿಸಬಹುದು. ಅದಾಗ್ಯೂ, ವಿಸ್ತೃತ ಮಾರ್ಗವು ಹೆಚ್ಚಿನ ಜನದಟ್ಟಣೆಯನ್ನು ಉಳಿಸಬಹುದೇ, ಮತ್ತು ಕಾರ್ಯಚರಣೆಯ ಅಡೆತಡೆಗಳನ್ನು ತಪ್ಪಿಸಬಹುದೇ ಎಂಬುದು ನಿಜವಾದ ಪರೀಕ್ಷೆಯಾಗಿದೆ.



Related posts

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಚೀನಾದ ಎಮ್‌.ಡಿ.ಆರ್‌.ಟಿ. ಗ್ಲೋಬಲ್ ಕಾನ್ಫರೆನ್ಸ್‌ನಲ್ಲಿ ಡಾ. ಆರ್. ಕೆ. ಶೆಟ್ಟಿ ಭಾಷಣ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಮಲಾಡ್ ಕುರಾರ್ ಶನೇಶ್ವರ ಮಂದಿರದ ವತಿಯಿಂದ ಉಳ್ಳಾಳ ಸೋಮೇಶ್ವರದಲ್ಲಿ, ಶ್ರೀ ಶನಿ ಮಹಾಪೂಜೆ.

Mumbai News Desk

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.

Mumbai News Desk