36.8 C
Karnataka
March 29, 2025
ಸುದ್ದಿ

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

ಮಂಗಳೂರು: ಕಲಾಭಿ(ರಿ) ಮತ್ತು ಅರೆಹೊಳೆ ಪ್ರತಿಷ್ಠಾನವು ಜಂಟಿಯಾಗಿ ಮಂಗಳೂರಿನ ಬೊಂದೆಲ್ ನಲ್ಲಿ ಕಲಾಗ್ರಾಮ ಎಂಬ ನೂತನ ಕಲಾ ವೇದಿಕೆಯ ಉದ್ಘಾಟನೆಗೆ ಸಜ್ಜಾಗಿದೆ. ಈ ರಂಗ ಮಂದಿರವು ಕಲಾತ್ಮಕ ಪ್ರತಿಭೆಗಳಿಗೆ ಹೊಸ ತಳಹದಿಯನ್ನು ಒದಗಿಸುವುದರ ಜೊತೆಗೆ, ನಾಟಕ, ಯಕ್ಷಗಾನ, ಜನಪದ ಕಲೆ, ಸಂಗೀತ, ನೃತ್ಯ ಮತ್ತು ಇತರ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುವ ಮಹತ್ವದ ಕೇಂದ್ರವಾಗಿ ರೂಪುಗೊಳ್ಳಲಿದೆ.

ಇದರ ಉದ್ಘಾಟನಾ ಸಮಾರಂಭವು ವಿಶ್ವ ರಂಗಭೂಮಿ ದಿನವಾದ ಮಾರ್ಚ್ 27, 2025, ಗುರುವಾರದಂದು ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಲಾಭಿ(ರಿ) ತಂಡದ ಕಲಾವಿದರಿಂದ ವಿಭಿನ್ನ ರಂಗ ಪ್ರಯೋಗವಾದ ಎ ಫ್ರೆಂಡ್ ಬಿಯೊಂಡ್ ದಿ ಫೆನ್ಸ್ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕವು ಈಗಾಗಲೇ ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ನಾಟಕೋತ್ಸವಗಳ್ಳಲ್ಲಿ ಪ್ರದರ್ಶನಗೊಂಡು ಜನಮನ್ನಣೆ ಗಳಿಸಿದೆ.

ಈ ನೂತನ ಕಲಾ ಕೇಂದ್ರವು ಯುವ ಕಲಾ ಪ್ರತಿಭೆಗಳಿಗೆ ಒಟ್ಟಾರೆಯಾಗಿ ಪ್ರೋತ್ಸಾಹ ನೀಡಲು, ರಂಗಭೂಮಿ ಅಭ್ಯಾಸದ ಹೊಸ ಆಯಾಮಗಳನ್ನು ಅನ್ವೇಷಿಸಿ ಪ್ರಾಯೋಗಿಸಲು ಹಾಗೂ ಕಲಾತ್ಮಕ ಸಂಸ್ಕೃತಿಯನ್ನು ಬೆಳೆಸಲು ಸಹಕಾರಿಯಾಗಲಿದೆ.

Related posts

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ರಂಗ ಪ್ರವೇಶ

Mumbai News Desk