32 C
Mumbai
March 7, 2026
Mumbai News Kannada
ಸುದ್ದಿ

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ





ಮಂಗಳೂರು: ಕಲಾಭಿ(ರಿ) ಮತ್ತು ಅರೆಹೊಳೆ ಪ್ರತಿಷ್ಠಾನವು ಜಂಟಿಯಾಗಿ ಮಂಗಳೂರಿನ ಬೊಂದೆಲ್ ನಲ್ಲಿ ಕಲಾಗ್ರಾಮ ಎಂಬ ನೂತನ ಕಲಾ ವೇದಿಕೆಯ ಉದ್ಘಾಟನೆಗೆ ಸಜ್ಜಾಗಿದೆ. ಈ ರಂಗ ಮಂದಿರವು ಕಲಾತ್ಮಕ ಪ್ರತಿಭೆಗಳಿಗೆ ಹೊಸ ತಳಹದಿಯನ್ನು ಒದಗಿಸುವುದರ ಜೊತೆಗೆ, ನಾಟಕ, ಯಕ್ಷಗಾನ, ಜನಪದ ಕಲೆ, ಸಂಗೀತ, ನೃತ್ಯ ಮತ್ತು ಇತರ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುವ ಮಹತ್ವದ ಕೇಂದ್ರವಾಗಿ ರೂಪುಗೊಳ್ಳಲಿದೆ.

ಇದರ ಉದ್ಘಾಟನಾ ಸಮಾರಂಭವು ವಿಶ್ವ ರಂಗಭೂಮಿ ದಿನವಾದ ಮಾರ್ಚ್ 27, 2025, ಗುರುವಾರದಂದು ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಲಾಭಿ(ರಿ) ತಂಡದ ಕಲಾವಿದರಿಂದ ವಿಭಿನ್ನ ರಂಗ ಪ್ರಯೋಗವಾದ ಎ ಫ್ರೆಂಡ್ ಬಿಯೊಂಡ್ ದಿ ಫೆನ್ಸ್ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕವು ಈಗಾಗಲೇ ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ನಾಟಕೋತ್ಸವಗಳ್ಳಲ್ಲಿ ಪ್ರದರ್ಶನಗೊಂಡು ಜನಮನ್ನಣೆ ಗಳಿಸಿದೆ.

ಈ ನೂತನ ಕಲಾ ಕೇಂದ್ರವು ಯುವ ಕಲಾ ಪ್ರತಿಭೆಗಳಿಗೆ ಒಟ್ಟಾರೆಯಾಗಿ ಪ್ರೋತ್ಸಾಹ ನೀಡಲು, ರಂಗಭೂಮಿ ಅಭ್ಯಾಸದ ಹೊಸ ಆಯಾಮಗಳನ್ನು ಅನ್ವೇಷಿಸಿ ಪ್ರಾಯೋಗಿಸಲು ಹಾಗೂ ಕಲಾತ್ಮಕ ಸಂಸ್ಕೃತಿಯನ್ನು ಬೆಳೆಸಲು ಸಹಕಾರಿಯಾಗಲಿದೆ.



Related posts

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk

ಡಾ.ಈಶ್ವರ ಅಲೆವೂರು ಅವರಿಗೆ  ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ

Mumbai News Desk