April 1, 2025
ಸುದ್ದಿ

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ


ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ ಎಸ್ ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರಾದ ದಿ. ಶ್ರೀ ರಾಘವ ಸುವರ್ಣರವರ ಧರ್ಮಪತ್ನಿ ಶ್ರೀಮತಿ ಕುಸುಮ ಸುವರ್ಣರವರು (76) ದಿನಾಂಕ 25-03-2025ರಂದು ಸ್ವಲ್ಪ ಸಮಯದ ಅನಾರೋಗ್ಯದಿಂದ ನಿಧನರಾದರು. ಮೃತರು ಧಾರ್ಮಿಕ ವಿಧಿವಿಧಾನಗಳನ್ನು ಅಳವಡಿಸಿಕೊಂಡು ಜನರಿಗೆ ಮಾರ್ಗದರ್ಶಕರಾಗಿದ್ದರು. ಮೃತರು ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರು ಅಭಯಚಂದ್ರ ಜೈನ್, ಮಾಜಿ ಸಚಿವರಾದ ವಿನಾಯಕ ಕುಮಾರ್‌ ಸೊರಕೆ, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸತೀಶ್‌ ಅಂಚನ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ಹರಿಶ್ಚಂದ್ರ ಪಿ ಸಾಲಿಯಾನ್, ಗೋಪಿನಾಥ ಪಡಂಗ, ಪ್ರಕಾಶ್ ಸುವರ್ಣ, ದನಂಜಯ ಮಟ್ಟು, ನಾರಾಯಣಗುರು ಸಮಾಜ ಸೇವಾ ಸಂಘ ಕೆ.ಎಸ್‌.ರಾವ್‌ ನಗರ ಇದರ ಅಧ್ಯಕ್ಷರಾದ ಮಹಾಬಲ ಸನಿಲ್, ಬಿಲ್ಲವ ಮುಖಂಡ ಜನಾರ್ದನ ಬಂಗೇರ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಅಸೀಫ್ ಇವರೆಲ್ಲರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ

Mumbai News Desk

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.

Mumbai News Desk