32 C
Mumbai
March 7, 2026
Mumbai News Kannada
ಸುದ್ದಿ

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ






ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ದರ ಏರಿಕೆ ಶಾಖ್ ನೀಡಿದೆ. ಬಸ್, ಮೆಟ್ರೋ, ವಿದ್ಯುತ್ ಬಳಿಕ ಕೆಎಂಎಫ್ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ಈ ಬಾರಿ ಪ್ರತಿ ಲೀಟರ್ ಹಾಲಿನ ದರ ಬರೋಬ್ಬರಿ 4 ರೂಪಾಯಿ ಏರಿಕೆಯಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಈ ಮೂಲಕ ರಾಜ್ಯದ ಜನರಿಗೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ.
ಹಾಲಿನ ದರ ಏರಿಕೆ ಬೇಡಿಕೆ ಹಲವು ಸಮಯಗಳಿಂದ ಇತ್ತು, ಆದರೆ ಈಗಾಗಲೇ ಇತರ ವಸ್ತುಗಳ ಏರಿಕೆಯಿಂದ ಜನರು ಕಂಗಾಲಾಗಿದ್ದು ರೈತರಿಗೆ ಇದರಿಂದ ಅನುಕೂಲ ಆದರೂ, ಗ್ರಾಹಕರಿಗೆ ಇದೊಂದು ಬರೆಯಾಗಿದೆ, ಹೀಗಾಗಿ ಸಂಪುಟ ಸಭೆಯಲ್ಲಿ ದರ ಏರಿಕೆ ಬಗ್ಗೆ ಗೊಂದಲ ಇದ್ದವು, ಆದರೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತರವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯ ಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ 4 ರೂಪಾಯಿ ಏರಿಕೆಗೆ ಒಪ್ಪಿಗೆ ನೀಡಿದೆ.
ದರ ಏರಿಕೆ ವಿವರ :
ನೀಲಿ ಪ್ಯಾಕೆಟ್ ಹಾಲು – 44 ರೂ. ನಿಂದ 48 ರೂ. (ಪ್ರತಿ ಲೀಟರ್)
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್ – 56 ರೂ. ನಿಂದ 60 ರೂ.
ಗ್ರೀನ್ ಸ್ಪೆಷಲ್ ಹಾಲು – 54 ರೂ. ನಿಂದ ರಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು – 52 ರೂ. ನಿಂದ 56 ರೂ.
ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ, ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್ ಗೆ ರೂ. 2 ಏರಿಕೆ ಮಾಡಲಾಗಿತ್ತು, ಆದರೆ ಇದೀಗ ಲೀಟರ್ ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುವ ರಾಜ್ಯದ ಜನರಿಗೆ ಹಾಲಿನ ಏರಿಕೆ ದೊಡ್ಡ ಹೊರೆಯಾದಂತಾಗಿದೆ.



Related posts

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸಡಗರದ ದೀಪಾವಳಿ ಹಬ್ಬದ ಆಚರಣೆ

Mumbai News Desk

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk