30.9 C
Mumbai
June 8, 2026
Mumbai News Kannada
ಸುದ್ದಿ

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ






ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ದರ ಏರಿಕೆ ಶಾಖ್ ನೀಡಿದೆ. ಬಸ್, ಮೆಟ್ರೋ, ವಿದ್ಯುತ್ ಬಳಿಕ ಕೆಎಂಎಫ್ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ಈ ಬಾರಿ ಪ್ರತಿ ಲೀಟರ್ ಹಾಲಿನ ದರ ಬರೋಬ್ಬರಿ 4 ರೂಪಾಯಿ ಏರಿಕೆಯಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಈ ಮೂಲಕ ರಾಜ್ಯದ ಜನರಿಗೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ.
ಹಾಲಿನ ದರ ಏರಿಕೆ ಬೇಡಿಕೆ ಹಲವು ಸಮಯಗಳಿಂದ ಇತ್ತು, ಆದರೆ ಈಗಾಗಲೇ ಇತರ ವಸ್ತುಗಳ ಏರಿಕೆಯಿಂದ ಜನರು ಕಂಗಾಲಾಗಿದ್ದು ರೈತರಿಗೆ ಇದರಿಂದ ಅನುಕೂಲ ಆದರೂ, ಗ್ರಾಹಕರಿಗೆ ಇದೊಂದು ಬರೆಯಾಗಿದೆ, ಹೀಗಾಗಿ ಸಂಪುಟ ಸಭೆಯಲ್ಲಿ ದರ ಏರಿಕೆ ಬಗ್ಗೆ ಗೊಂದಲ ಇದ್ದವು, ಆದರೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತರವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯ ಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ 4 ರೂಪಾಯಿ ಏರಿಕೆಗೆ ಒಪ್ಪಿಗೆ ನೀಡಿದೆ.
ದರ ಏರಿಕೆ ವಿವರ :
ನೀಲಿ ಪ್ಯಾಕೆಟ್ ಹಾಲು – 44 ರೂ. ನಿಂದ 48 ರೂ. (ಪ್ರತಿ ಲೀಟರ್)
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್ – 56 ರೂ. ನಿಂದ 60 ರೂ.
ಗ್ರೀನ್ ಸ್ಪೆಷಲ್ ಹಾಲು – 54 ರೂ. ನಿಂದ ರಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು – 52 ರೂ. ನಿಂದ 56 ರೂ.
ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ, ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್ ಗೆ ರೂ. 2 ಏರಿಕೆ ಮಾಡಲಾಗಿತ್ತು, ಆದರೆ ಇದೀಗ ಲೀಟರ್ ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುವ ರಾಜ್ಯದ ಜನರಿಗೆ ಹಾಲಿನ ಏರಿಕೆ ದೊಡ್ಡ ಹೊರೆಯಾದಂತಾಗಿದೆ.



Related posts

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.

Mumbai News Desk

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk