30 C
Mumbai
April 24, 2026
Mumbai News Kannada
ಸುದ್ದಿ

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ






ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ದರ ಏರಿಕೆ ಶಾಖ್ ನೀಡಿದೆ. ಬಸ್, ಮೆಟ್ರೋ, ವಿದ್ಯುತ್ ಬಳಿಕ ಕೆಎಂಎಫ್ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ಈ ಬಾರಿ ಪ್ರತಿ ಲೀಟರ್ ಹಾಲಿನ ದರ ಬರೋಬ್ಬರಿ 4 ರೂಪಾಯಿ ಏರಿಕೆಯಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಈ ಮೂಲಕ ರಾಜ್ಯದ ಜನರಿಗೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ.
ಹಾಲಿನ ದರ ಏರಿಕೆ ಬೇಡಿಕೆ ಹಲವು ಸಮಯಗಳಿಂದ ಇತ್ತು, ಆದರೆ ಈಗಾಗಲೇ ಇತರ ವಸ್ತುಗಳ ಏರಿಕೆಯಿಂದ ಜನರು ಕಂಗಾಲಾಗಿದ್ದು ರೈತರಿಗೆ ಇದರಿಂದ ಅನುಕೂಲ ಆದರೂ, ಗ್ರಾಹಕರಿಗೆ ಇದೊಂದು ಬರೆಯಾಗಿದೆ, ಹೀಗಾಗಿ ಸಂಪುಟ ಸಭೆಯಲ್ಲಿ ದರ ಏರಿಕೆ ಬಗ್ಗೆ ಗೊಂದಲ ಇದ್ದವು, ಆದರೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತರವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯ ಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ 4 ರೂಪಾಯಿ ಏರಿಕೆಗೆ ಒಪ್ಪಿಗೆ ನೀಡಿದೆ.
ದರ ಏರಿಕೆ ವಿವರ :
ನೀಲಿ ಪ್ಯಾಕೆಟ್ ಹಾಲು – 44 ರೂ. ನಿಂದ 48 ರೂ. (ಪ್ರತಿ ಲೀಟರ್)
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್ – 56 ರೂ. ನಿಂದ 60 ರೂ.
ಗ್ರೀನ್ ಸ್ಪೆಷಲ್ ಹಾಲು – 54 ರೂ. ನಿಂದ ರಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು – 52 ರೂ. ನಿಂದ 56 ರೂ.
ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ, ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್ ಗೆ ರೂ. 2 ಏರಿಕೆ ಮಾಡಲಾಗಿತ್ತು, ಆದರೆ ಇದೀಗ ಲೀಟರ್ ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುವ ರಾಜ್ಯದ ಜನರಿಗೆ ಹಾಲಿನ ಏರಿಕೆ ದೊಡ್ಡ ಹೊರೆಯಾದಂತಾಗಿದೆ.



Related posts

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk

ಮಂಗಳೂರಿನ ಕುಲಾಲ ಭವನದಲ್ಲಿ ಮುಂಬಯಿ ಕುಲಾಲರ ಸ್ನೇಹ ಸಮ್ಮಿಲನ

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರಾದ ಮುರಳಿ ಕೆ. ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk