July 23, 2026
Mumbai News Kannada
ಸುದ್ದಿ

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ







ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​~ ಹೆಚ್ ಡುಂಡಿರಾಜ್

ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.

ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಸಹಜವಾಗಿ ಬರೆದರೆ ಅದು ಕಾವ್ಯ ಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ , ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ​ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ​. ಕವಿತೆ ತಪಸ್ಸು, ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ಎಂದು ಹೇಳಿದರು.

​ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ​ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು.
ಲಹರಿ ಪ್ರಾರ್ಥಿಸಿದರು. ಶಿಲ್ಪಾ ಜೋಶಿ ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ​ ಕಸಾಪ ಘಟಕ ಅಧ್ಯಕ್ಷ ರವಿರಾಜ​ ಎಚ್. ಪಿ. ಪ್ರಾಸ್ತಾವಿಕ ಮಾತನಾಡಿದರು. ಜನಾರ್ದನ ಕೊಡವೂರು ವಂದಿಸಿದರು.



Related posts

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk