30.5 C
Mumbai
June 8, 2026
Mumbai News Kannada
ಕ್ರೀಡೆ

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್





ಮುಂಬಯಿ : ಪರಿಸರದ ತುಳು – ಕನ್ನಡಿಗರನ್ನು ಒಗ್ಗೂಡಿಸುವಲ್ಲಿ ತುಳು ಸಂಘ ಬೊರಿವಲಿ ಹಲವಾರು ಸಮಾಜಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸಂಘದ ಯುವ ವಿಭಾಗದಿಂದ ನಡೆದ ಕ್ರಿಕೆಟ್ ಪಂದ್ಯಾಟ ಸಂಘದ ಹಿರಿ ಕಿರಿಯ ಸದಸ್ಯರುಗಳನ್ನು ಒಗ್ಗೂಡಿಸುದರೊಂದಿಗೆ ಸಂಘದ ಬೆಳವಣೆಗೆಗೆ ಸಹಕಾರಿಯಾಗುವುದು ಎಂದು ತುಳು ಸಂಘ ಬೊರಿವಲಿಯ ಅಧ್ಯಕ್ಷ ಹರೀಶ್ ಮೈಂದನ್ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟಕ್ಕೆ ಶುಭ ಹಾರೈಸಿದರು.


ಸಂಘದ ಯುವ ವಿಭಾಗದ ವತಿಯಿಂದ ಕ್ರಿಕೆಟ್ ಪಂದ್ಯಾಟವು ಮಾ. 30 ರಂದು ಬೊರಿವಲಿ (ಪ.) ಎಕ್ಸರ್ ವಿಲೇಜ್ ಹ್ಯಾಟ್ರಿಕ್ ಸ್ಪೋರ್ಟ್ಸ್ ಫೀಲ್ಡ್ ನ್ಯೂ ಲಿಂಕ್ ರಸ್ತೆ, ಇಲ್ಲಿ ಯುವ ವಿಭಾಗದ ಕಾರ್ಯಾಧ್ಯಕ್ಷರಾದ ನ್ಯಾ. ರಾಘವ ಎಂ. ಇವರ ಮಾರ್ಗದರ್ಶನದಲ್ಲಿ ನಡೆಯಿತು. ಸಂಘದ ಯುವ ವಿಭಾಗದ ರೋಹಿತ್ ಪೂಜಾರಿ ನಾಯಕತ್ವದ ತುಳು ಸೂಪರ್ ಕಿಂಗ್ಸ್ ಟೀಮ್ ವಿಜಯಿ ಸಾಧಿಸಿದೆ. ರನ್ನರ್ ಅಫ್ ಆಗಿ ಚಂದ್ರಹಾಸ ಬೆಲ್ಚಡ ನಾಯಕತ್ವದ ತುಳು ಸೂಪರ್ ರೈಸರ್ಸ್.
ಇದರಲ್ಲಿ ಸಂಘದ ಎಲ್ಲಾ ಟೀಮ್ ಗಳು ಬಾಗವಹಿಸಿದ್ದು ದಿಲೀಪ್ ಜವೇರಿ ಪಟೇಲ್ ಮತ್ತು ಹರ್ಷ್ ಸೋಲಂಕಿ ತೀರ್ಪುಗಾರರಾಗಿ ಸಹಕರಿಸಿದರು.
ಸಂಘದ ಅಧ್ಯಕ್ಷರಾದ ಹರೀಶ್ ಮೈಂದನ್, ಪ್ರಧಾನ ಕಾರ್ಯದರ್ಶಿ ಕೃಷ್ಣ ರಾಜ್ ಸುವರ್ಣ, ಗೌ. ಕೋಶಾಧಿಕಾರಿ ದಿವಾಕರ ಕರ್ಕೇರ, ತುಳು ಸಂಘ ಬೊರಿವಲಿ ಯ ಉಪಾಧ್ಯಕ್ಷ ರಜಿತ್ ಸುವರ್ಣ, ಜೊತೆ ಕೋಶಾಧಿಕಾರಿ ಟಿವಿ ಪೂಜಾರಿ, ಜೊತೆ ಕಾರ್ಯದರ್ಶಿ ತಿಲೋತ್ತಮ ವೈದ್ಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ, ವಿಜಯಕುಮಾರ್ ಮೂಲ್ಕಿ, ಮಹಿಳಾ ವಿಭಾಗದ ಕಾರ್ಯದರ್ಶಿ ವಿಜಯಲಕ್ಷ್ಮೀ ದೇವಾಡಿಗ, ಸವಿತ ಸಿ. ಶೆಟ್ಟಿ, ಕಸ್ತೂರಿ ಎಸ್. ಶೆಟ್ಟಿ, ರಾಜೇಶ್ವರಿ ಜಿ. ಸುವರ್ಣ, ಜಯಂತಿ ಕೆ. ಶೆಟ್ಟಿ, ಸುಮತಿ ಸಾಲ್ಯಾನ್, ಕುಸುಮ ಬಿ. ಶೆಟ್ಟಿ, ಪೂರ್ಣಿಮಾ ಆರ್. ಪೂಜಾರಿ, ವೇದ ಶೆಟ್ಟಿ, ಅಶೋಕ್ ಪೂಜಾರಿ, ಲಕ್ಷ್ಮಿ ದೇವಾಡಿಗ, ಜಯರಾಮ್ ಶೆಟ್ಟಿ, ಸರಸ್ವತಿ ರಾವ್, ಸುನಂದ ಶೆಟ್ಟಿ, ಪ್ರವೀಣ್ ಶೆಟ್ಟಿ ಹಾಗೂ ಸಂಘ ಉಪವಿಭಾಗಗಳ ಇತರ ಸದಸ್ಯರು ಸಹಕರಿಸಿದರು.



Related posts

ಅಹಮದಾಬಾದ್‌ನಲ್ಲಿ ಅಬ್ಬರಿಸಿದ ಟೀಮ್ ಇಂಡಿಯಾ: ನ್ಯೂಜಿಲೆಂಡ್‌ಗೆ ಮಣ್ಣು ಮುಕ್ಕಿಸಿ ಮೂರನೇ ಬಾರಿಗೆ ಟಿ20 ಕಿರೀಟ ಮುಡಿಗೇರಿಸಿಕೊಂಡ ಭಾರತ

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 

Mumbai News Desk

ಕಾಂದಿವಲಿ ಪಶ್ಚಿಮದ ರಂಜಿತ್ ಪೂಜಾರಿಗೆ ವಿಶ್ವ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Mumbai News Desk

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.

Mumbai News Desk

ವೈಭವ್ ಸೂರ್ಯವಂಶಿ ಬಿರುಗಾಳಿ ಬ್ಯಾಟಿಂಗ್ ಗೆ ಇಂಗ್ಲೆಂಡ್ ನಿರುತ್ತರ; 6ನೇ ಬಾರಿ ಅಂಡರ್ 19 ವಿಶ್ವಕಪ್ ಎತ್ತಿ ಹಿಡಿದ ಭಾರತ

Mumbai News Desk