30.5 C
Mumbai
June 8, 2026
Mumbai News Kannada
ಮುಂಬಯಿ

ಕರ್ನಿರೆ ಗಂಗಾಧರ್ ಅಮೀನ್ ಅವರ “ಕೊಂಕಣ್ ಸ್ವಾದ್” ಗೆ ಟೈಮ್ಸ್ ಪುಡ್ ಪ್ರಶಸ್ತಿ.





ಮುಂಬೈಯ ಪ್ರಸಿದ್ಧ ಸಮಾಜಸೇವಕ, ಬಿಲ್ಲವ ಚೇಂಬರ್ಸ್ ಆಫ್  ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ ನಿರ್ದೇಶಕ ಕರ್ನಿರೆ ಗಂಗಾಧರ್ ಅಮೀನ್ ಅವರು 25 ವರ್ಷಗಳ ಹಿಂದೆ ಪ್ರಾರಂಭಿಸಿದ ಕೊಂಕಣ್ ಸ್ವಾದ್  (ಗೋಮಂತಕ್ ಸೀ ಫುಡ್, (Gomantak sea food )ಹೊಟೇಲಿಗೆ 2025 ರ ಟೈಮ್ಸ್ ಫುಡ್ & ನೈಟ್‌ಲೈಫ್ ಪ್ರಶಸ್ತಿ ದೊರಕಿದೆ. 

ಮಾ 29 ರಂದು ಅಂದೇರಿ ಪೂರ್ವದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಐಟಿಸಿ ಮರಾಠ ಹೋಟೆಲ್  ಸಭಾಂಗಣದಲ್ಲಿ ಟೈಮ್ಸ್ ಸಮೂಹದವರು ಕೊಡಮಾಡಿದ ಈ ಪ್ರಶಸ್ತಿಯನ್ನು ಕೊಂಕಣ್ ಸ್ವಾದ್ ಸಮೂಹ ಹೋಟೇಲಿನ ಕರ್ನಿರೆ  ಗಂಗಾಧರ್ ಎನ್ ಅಮೀನ್, ಕರಣ್ ಶೆಟ್ಟಿ, ಮತ್ತು ಐಶ್ವರ್ಯ ಗಂಗಾಧರ್ ಅಮೀನ್ ಸ್ವೀಕರಿಸಿದರು. 

ಕೊಂಕಣ್ ಸ್ವಾದ್ ಹೋಟೇಲು ಮುಂಬಯಿಯ ಅತ್ಯುತ್ತಮ ಸಮುದ್ರಾಹಾರ (ಸೀ ಫುಡ್) ಕ್ಯಾಶುಯಲ್ ಡೈನಿಂಗ್ ಮತ್ತು  ಅತ್ಯುತ್ತಮ ಕರಾವಳಿ ಕ್ಯಾಶುಯಲ್ ಡೈನಿಂಗ್ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಹೆಮ್ಮೆ ತಂದಿದ್ದಾರೆ.

ಅತ್ಯುತ್ತಮ ಸಮುದ್ರಾಹಾರವನ್ನು ಪೂರೈಸಲು ಮತ್ತು ಕರಾವಳಿ ಪಾಕಪದ್ಧತಿಯನ್ನು ಉತ್ತೇಜಿಸಲು ಅವರ  25 ವರ್ಷಗಳ ಕಠಿಣ ಪರಿಶ್ರಮ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ತಂದುಕೊಟ್ಟಿದೆ.

  ಗೊರೆಗಾಂವ್ ಪಶ್ಚಿಮದ ಲಿಂಕ್ ರೋಡ್ ನಲ್ಲಿ ಪ್ರಾರಂಭಗೊಂಡ ಹೋಟೆಲ್ ಇದೀಗ ಅಂಧೇರಿ ಪೂರ್ವದ ಜೋಗೇಶ್ವರಿ ಪಶ್ಚಿಮದ ಲಿಂಕ್ ರೋಡಿನಲ್ಲಿಯೂ ಆರಂಭವಾಗಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.



Related posts

ಮುಂಬೈ ‘ಎನ್ಕೌಂಟರ್ ಸ್ಪೆಶಲಿಸ್ಟ್’ ದಯಾ ನಾಯಕ್ ನಿವೃತ್ತಿಗೆ ಎರಡು ದಿನಗಳ ಮೊದಲು ಎಸಿಪಿ ಹುದ್ದೆಗೆ ಬಡ್ತಿ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಜಿ.ಎಸ್.ಬಿ.ಎಸ್. ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ, ಮಾಹಿಮ್ ಘಟಕದ ವಿಸ್ತರಣೆಯ ಉದ್ಘಾಟನೆ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್  – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರುಇವರ ಸಹಯೋಗದಲ್ಲಿ” ಆಟಿದ ಪೊರ್ಲ ಪೊಲಬು”

Mumbai News Desk

ಬಿಲ್ಲವರ ಅಸೋಸಿಯೇಶನ್ ಮೀರಾ ರೋಡ್ ಸ್ಥಳೀಯ ಕಚೇರಿಯಿಂದ ಅದ್ಧೂರಿ ಸ್ನೇಹ ಸಮ್ಮಿಲನ;

Mumbai News Desk