32 C
Mumbai
April 23, 2026
Mumbai News Kannada
ಪ್ರಕಟಣೆ

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.






ತುಳು – ಕನ್ನಡಿಗ 200 ಕ್ಕಿಂತ ಹೆಚ್ಚು ಕಲಾವಿದರಿಂದ ಯಕ್ಷ-ಗಾನ- ನಾಟ್ಯ ಸಂಭ್ರಮ.

ಮೀರಾ ರೋಡ್ :. ಪ್ರತಾಪ್ ಸರ್ ನಾಯಕ್ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಿರುವ
ಚೈತ್ರ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ಮೀರಾ – ಭಾಯಂದರ್ ಸಂಘಟಕ ಬಂಟರ ಸಂಘ, ಮುಂಬೈಯ ಬಂಟರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರು ಮತ್ತು ಮೀರಾ – ಭಾಯಂದರ್ ಭಾರತೀಯ ಜನತಾ ಪಕ್ಷದ ಮುಖಂಡ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಿನಲ್ಲಿ ಎ. 4 ರಂದು ಶುಕ್ರವಾರ ಸಂಜೆ ಗಂಟೆ 6:00 ರಿಂದ 9:00ರ ವರೆಗೆ
ನಾಮ್ಹಾರ್ ಗೋಖಲೆ ಮೈದಾನ, ಬೆವರ್ಲಿ ಪಾರ್ಕ್‌, ಆ‌ರ್.ಬಿ.ಕೆ ಶಾಲೆ ಹತ್ತಿರ, ಮೀರಾ ಭಾಯಂದರ್ ಇಲ್ಲಿ ಮಹಾರಾಷ್ಟ್ರದ ನೂತನ
ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಇವರಿಗೆವಿಶೇಷ ಸನ್ಮಾನ ಹಾಗೂ ತುಳು – ಕನ್ನಡಿಗ 200 ಕ್ಕಿಂತ ಹೆಚ್ಚು ಕಲಾವಿದರಿಂದ ಯಕ್ಷ-ಗಾನ ನಾಟ್ಯ ಸಂಭ್ರಮ ನಡೆಯಲಿದೆ.
ಮೀರಾ – ಭಾಯಂದರ್ ನ ತುಳು – ಕನ್ನಡಿಗರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ, ಹೋಟೆಲ್ ಉದ್ಯಮಿಗಳ, ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ.
ಪ್ರಪ್ರಥಮ ಬಾರಿಗೆ ಸುಮಾರು 200 ತುಳು ಕನ್ನಡದ ಕಲಾವಿದರು ತಮ್ಮ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ.
ಮೀರಾ – ಭಾಯಂದರ್ ನ ಜನಪ್ರಿಯ ಶಾಸಕರಾಗಿ ತುಳು ಕನ್ನಡಿಗರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವ ಪ್ರತಾಪ್ ಸರ್ ನಾಯಕ್ ಈ ಬಾರಿಯ ಮಹಾರಾಷ್ಟ್ರ ಸರಕಾರದ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದು ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.
ತುಳು ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘಟಕರಾದಗಿರೀಶ್ ಶೆಟ್ಟಿ ತೆಳ್ಳಾರು, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು ಹಾಗೂ ಮೀರಾ- ಭಾಯಂದರ್ ನ ತುಳು ಕನ್ನಡಿಗರು ವಿನಂತಿಸಿಕೊಂಡಿದ್ದಾರೆ.



Related posts

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (ಎಂಪಿಎಲ್) ಕ್ರಿಕೆಟ್ ಟೂರ್ನಮೆಂಟ್ – 2026ಕ್ಕೆ ಆಹ್ವಾನ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk