July 23, 2026
Mumbai News Kannada
ಪ್ರಕಟಣೆ

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.








ತುಳು – ಕನ್ನಡಿಗ 200 ಕ್ಕಿಂತ ಹೆಚ್ಚು ಕಲಾವಿದರಿಂದ ಯಕ್ಷ-ಗಾನ- ನಾಟ್ಯ ಸಂಭ್ರಮ.

ಮೀರಾ ರೋಡ್ :. ಪ್ರತಾಪ್ ಸರ್ ನಾಯಕ್ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಿರುವ
ಚೈತ್ರ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ಮೀರಾ – ಭಾಯಂದರ್ ಸಂಘಟಕ ಬಂಟರ ಸಂಘ, ಮುಂಬೈಯ ಬಂಟರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರು ಮತ್ತು ಮೀರಾ – ಭಾಯಂದರ್ ಭಾರತೀಯ ಜನತಾ ಪಕ್ಷದ ಮುಖಂಡ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಿನಲ್ಲಿ ಎ. 4 ರಂದು ಶುಕ್ರವಾರ ಸಂಜೆ ಗಂಟೆ 6:00 ರಿಂದ 9:00ರ ವರೆಗೆ
ನಾಮ್ಹಾರ್ ಗೋಖಲೆ ಮೈದಾನ, ಬೆವರ್ಲಿ ಪಾರ್ಕ್‌, ಆ‌ರ್.ಬಿ.ಕೆ ಶಾಲೆ ಹತ್ತಿರ, ಮೀರಾ ಭಾಯಂದರ್ ಇಲ್ಲಿ ಮಹಾರಾಷ್ಟ್ರದ ನೂತನ
ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಇವರಿಗೆವಿಶೇಷ ಸನ್ಮಾನ ಹಾಗೂ ತುಳು – ಕನ್ನಡಿಗ 200 ಕ್ಕಿಂತ ಹೆಚ್ಚು ಕಲಾವಿದರಿಂದ ಯಕ್ಷ-ಗಾನ ನಾಟ್ಯ ಸಂಭ್ರಮ ನಡೆಯಲಿದೆ.
ಮೀರಾ – ಭಾಯಂದರ್ ನ ತುಳು – ಕನ್ನಡಿಗರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ, ಹೋಟೆಲ್ ಉದ್ಯಮಿಗಳ, ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ.
ಪ್ರಪ್ರಥಮ ಬಾರಿಗೆ ಸುಮಾರು 200 ತುಳು ಕನ್ನಡದ ಕಲಾವಿದರು ತಮ್ಮ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ.
ಮೀರಾ – ಭಾಯಂದರ್ ನ ಜನಪ್ರಿಯ ಶಾಸಕರಾಗಿ ತುಳು ಕನ್ನಡಿಗರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವ ಪ್ರತಾಪ್ ಸರ್ ನಾಯಕ್ ಈ ಬಾರಿಯ ಮಹಾರಾಷ್ಟ್ರ ಸರಕಾರದ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದು ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.
ತುಳು ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘಟಕರಾದಗಿರೀಶ್ ಶೆಟ್ಟಿ ತೆಳ್ಳಾರು, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು ಹಾಗೂ ಮೀರಾ- ಭಾಯಂದರ್ ನ ತುಳು ಕನ್ನಡಿಗರು ವಿನಂತಿಸಿಕೊಂಡಿದ್ದಾರೆ.



Related posts

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ – ಜು. 20ಕ್ಕೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ; ನಾಲಾಸೋಪಾರ ಮೇ 27. ಶ್ರೀ ಶನಿ ಜಯಂತಿ ಉತ್ಸವ.

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk