June 25, 2026
Mumbai News Kannada
ಮುಂಬಯಿ

ಅನಿತಾ ಪಿ.ತಾಕೊಡೆಯವರಿಗೆ ಚೆಂಬೂರು ಕರ್ನಾಟಕ ಸಂಘ ಕೊಡಮಾಡುವ “ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿ”





ಚೆಂಬೂರು ಕರ್ನಾಟಕ ಸಂಘವು ಪ್ರತಿವರ್ಷ ಕನ್ನಡಕ್ಕಾಗಿ ಕೆಲಸಮಾಡಿದ ತುಳು ಕನ್ನಡಿಗರಿಗೆ ಚೆಂಬೂರು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರು ಹಾಗೂ ನ್ಯಾಯವಾದಿ ಅರಾಟೆ ಸುಧಾಕರ ಅವರು ತಮ್ಮ ಅಜ್ಜಿಯ ಸ್ಮರಣಾರ್ಥ ಕೊಡಮಾಡುವ ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಮಾರ್ಚ್ 29ರಂದು ಚೆಂಬೂರು ಕರ್ನಾಟಕ ಸಂಘ ಅಯೋಜಿಸಿದ ಸಾಹಿತ್ಯ ಸಹವಾಸ ಕಾರ್ಯಕ್ರಮದಲ್ಲಿ ಈ ವರ್ಷದ ಪ್ರಶಸ್ತಿಯನ್ನು ಅನಿತಾ ಪಿ. ತಾಕೊಡೆಯವರಿಗೆ ಪ್ರದಾನಿಸಲಾಯಿತು.

ಚೆಂಬೂರು ಕರ್ನಾಟಕ ಹೈಸ್ಕೂಲ್ ನ ಸಭಾಂಗಣದಲ್ಲಿ ನಡೆದ ಸಾಹಿತ್ಯ ಸಹವಾಸ ಕಾರ್ಯಕ್ರಮವು ವಿಭಿನ್ನ ರೀತಿಯಲ್ಲಿ ಸಂಯೋಜನೆಗೊಂಡಿತ್ತು. ಚೆಂಬೂರ್ ಕರ್ನಾಟಕ ಶಾಲೆಯ ವಿದ್ಯಾರ್ಥಿಗಳ ಕವಾಯತ್ತು ಪ್ರದರ್ಶನದ ಮೂಲಕ ಅತಿಥಿಗಳನ್ನು ಸ್ವಾಗತಿಸಿದ ರೀತಿ, ನೀಡಿದ ಆದರ ಆತಿಥಘಳು ವಿಶಿಷ್ಟವಾಗಿತ್ತು.


ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ, ಬಾಂಬೆ ಬಂಟ್ಸ್ ಅಸೋಸಿ ಯೇಶನ್ನ ಮಾಜಿ ಅಧ್ಯಕ್ಷ ಅಶೋಕ್ ಡಿ. ಶೆಟ್ಟಿ, ರಾಷ್ಟ್ರೀಯ ಕನ್ನಡರತ್ನ ಪ್ರಶಸ್ತಿ ಪಡೆದ ಸಮಾಜ ಸೇವಕಿ ನಿವೇದಿತಾ ಹಾವನೂರು ಹೊನ್ನಟ್ಟಿ, ಸಂಘದ ವಾರ್ಷಿಕ ವೈ.ಜಿ. ಶೆಟ್ಟಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಪಡೆದ ರಾಮ ಆಚಾರ್ಯ, ನ್ಯಾಯವಾದಿ ಸುಬ್ಬಯ್ಯ ಶೆಟ್ಟಿ ದತ್ತಿ ಪುರಸ್ಕಾರವನ್ನು ಪಡೆದ ಡಾ| ಉಮಾ ರಾಮ ರಾವ್, ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ ಚಂದ್ರಕಾಂತ ಎಸ್. ನಾಯಕ್, ಗೌರವ ಕೋಶಾಧಿಕಾರಿ ಅರುಣ್ ಕುಮಾ‌ರ್ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಪ್ರಭಾಕರ ಬಿ. ಬೋಳಾರ ಮತ್ತು ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅರ್ಚನಾ ಪೂಜಾರಿ, ವಿಜೇತಾ ಸುವರ್ಣ, ಭಾರತಿ ಶೆಟ್ಟಿ ಅಕ್ಷತಾ ರಾವ್ ಅತಿಥಿಗಳು ಹಾಗೂ ಪ್ರಶಸ್ತಿ ವಿಜೇತರನ್ನು ಪರಿಚಯಿಸಿದರು. ಶಾಲಾ ಶಿಕ್ಷಕಿ ಶ್ಯಾಮಲಾ ಉಚ್ಚಿಲ್ ಕಾರ್ಯಕ್ರಮವನ್ನು ನಿರೂಪಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಎಸ್. ಶೇಣದ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಪ್ರಿಯ ಬಳಗ ಮೀರಾ-ಭಾಯಂದರ್ ಇದರ ಉದಯೋನ್ಮುಖ ಬಾಲಕಲಾವಿದೆ ರಿಂದ ಯಕ್ಷ ಗುರು ನಾಗೇಶ್ ಪೂಳಲಿ ನಿರ್ದೇಶನದಲ್ಲಿ ಕದಂಬ ಕೌಶಿಕೆ ಎಂಬ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನಗೊಂಡಿತು.



Related posts

ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ.

Mumbai News Desk

ಡೊಂಬಿವಲಿಯ ರಾಧಾಕೃಷ್ಣ ಶನೀಶ್ವರ ಮಂದಿರದಲ್ಲಿ ಕೃಷ್ಣ ಜನ್ಮಾಷ್ಟಮಿಯ ಭಕ್ತಿಮಯ ಆಚರಣೆ

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ಬಂಟರ ಸಂಘ, ಮುಂಬಯಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ‌ ವಿಭಾಗ- ಆಟಿದ ಪೊರ್ಲ್ ತಿರ್ಲ್ ಕಾರ್ಯಕ್ರಮ

Mumbai News Desk

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk