July 22, 2026
Mumbai News Kannada
ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ







ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆ ಎಸ್ ಕೋಡಿ, ತೋಕೂರು ವತಿಯಿಂದ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ದೀಪ ಪ್ರಜ್ವಲನೆಗೊಳಿಸಿ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್. ಕೋಡಿ ಇದರ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರು ವಹಿಸಿದ್ದರು,

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಶ್ರೀ ಜಯಾನಂದ ಎನ್. ಸುವರ್ಣರವರು ದೀಪ
ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಗುರುರಾಜ್ ಎಸ್. ಪೂಜಾರಿ, ಮಹಿಳಾ ವೇದಿಕೆಯ ಉಪಾಧ್ಯಕ್ಷರಾದ ಶ್ರೀಮತಿ ಅಮಿತಾ ದಿನಕರ್ ಸಾಲ್ಯಾನ್, ಯುವ ವೇದಿಕೆಯ ಸದಸ್ಯರಾದ ಶ್ರೀ ಲೋಹಿತ್ ರವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಮುಲ್ಕಿಯ ನ್ಯಾಯವಾದಿಗಳಾದ ಶ್ರೀ ರವೀಶ್ ಕಾಮತ್ ರವರು ವ್ಯಕ್ತಿತ್ವ ವಿಕಸನ ಮತ್ತು ನೀತಿ ಶಿಕ್ಷಣದ ಬಗ್ಗೆ ವಿವರಿಸಿ ಹೇಳಿದರು.

ನೃತ್ಯ ಕಲಿಕೆಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಶ್ರೀಮತಿ ನೀಮಾ ಸನಿಲ್ ಹಳೆಯಂಗಡಿಯವರು ಮಕ್ಕಳಿಗೆ ನೃತ್ಯ ಶಿಕ್ಷಣವನ್ನು ನೆರವೇರಿಸಿ ಕೊಟ್ಟರು

ಕಾರ್ಯಕ್ರಮದಲ್ಲಿ ಶ್ರೀಮತಿ ಕುಶಲ ಎಸ್. ಕುಕ್ಯಾನ್ ರವರು ಪ್ರಾರ್ಥಿಸಿ, ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳಾದ ಶ್ರೀಮತಿ ಸುನೀತಾ ಗುರುರಾಜ್ ರವರು ಸ್ವಾಗತಿಸಿ, ಬಬಿತಾ ಜೆ. ಸುವರ್ಣರವರು ವಂದನಾರ್ಪಣೆಗೈದರು

ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮವನ್ನು ನಿರೂಪಿಸಿದರು.



Related posts

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ

Mumbai News Desk

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ  ದ  , 50ನೇ ವಾರ್ಷಿಕ ಮಹಾಪೂಜೆ, ಗೆ ಚಾಲನೆ.

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk