September 6, 2026
Mumbai News Kannada
ಮುಂಬಯಿ

ಸಾಫಲ್ಯ ಸೇವಾ ಸಂಘ ಮುಂಬಯಿ (ರಿ ) ಮಹಿಳಾ ವಿಭಾಗದ ವತಿಯಿಂದ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮಕ್ಕೆ ಭೇಟಿ





ಸಮಾಜ ಸೇವೆಗೆ ಹೆಸರಾಗಿರುವ ಸಾಫಲ್ಯ ಸೇವಾ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಲಕ್ಮೀ ಮೆಂಡನ್ ಅವರ ನೇತೃತ್ವದಲ್ಲಿ ವಿಭಾಗದ ಸದಸ್ಯೆಯರು ತಾ.12/04/2025ರಂದು ಬೆಳಿಗ್ಗೆ 11:30ಕ್ಕೆ ಖಾರ್ ಘರ್ ನಲ್ಲಿರುವ ಗಿರಿಜಾ ವೆಲ್ಫೇರ್ ಅನಾಥಾಶ್ರಮ ಮತ್ತು ಬಾಲಗೃಹಕ್ಕೆ ಭೇಟಿ
ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೌ. ಪ್ರ. ಕಾರ್ಯದರ್ಶಿ ಶ್ರೀ ಭಾಸ್ಕರ್ ಸಪಲಿಗ ಅವರು ಸಾಫಲ್ಯ ಸೇವಾ ಸಂಘವು ಕಳೆದ ಕೆಲವು ವರ್ಷಗಳಿಂದ ಅನಾಥಾಶ್ರಮಕ್ಕೆ ನಗದು ರೂಪದಲ್ಲಿ ಮತ್ತು ಅವಶ್ಯಕ ವಸ್ತುಗಳ ರೂಪದಲ್ಲಿ ಸಹಾಯ ಹಸ್ತವನ್ನು ನೀಡುತ್ತಾ ಬಂದಿದೆ. ಇಂದು ಕೂಡ
₹ 65,000/-( ಮಹಿಳಾ ವಿಭಾಗದ ಸದಸ್ಯರು ಹಾಗೂ ದಾನಿಗಳ ಕೊಡುಗೆ) ಮತ್ತು CSR ಫಂಡಿನಿಂದ ₹ 2,50,000/- ಗಳನ್ನು ಅನಾಥಾಶ್ರಮಕ್ಕೆ ನೀಡಿ ಉದಾರತೆ, ದಯೆ ಮತ್ತು ದಾನದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. 30 ಬಾಲಕರು ಮತ್ತು 200ರಷ್ಟು ಹಿರಿಯ ನಾಗರಿಕರನ್ನು ಸಲಹುತ್ತಿರುವ ಈ ಅನಾಥಾಶ್ರಮದ ಕಾರ್ಯ ಸ್ತುತ್ಯರ್ಹವಾಗಿದೆ. ಇನ್ನು ಮುಂದೆಯೂ ಈ ಅನಾಥಾಶ್ರಮಕ್ಕೆ ಸಂಘವು ಕೈಲಾದ ಸಹಾಯ ಮಾಡುವುದೆಂದು ಭರವಸೆ ನೀಡಿದರು.

ಅನಾಥಾಶ್ರಮದ ವತಿಯಿಂದ ದಾನವನ್ನು ಹಾಗೂ ಅತ್ಯಾವಶ್ಯಕ ವಸ್ತುಗಳನ್ನು (100 ಬೆಡ್ ಶೀಟ್ 50 ಬಾಕ್ಸ್ ಡೈಪರ್ ಗಳನ್ನು ಸ್ವೀಕರಿಸಿದ ಶ್ರೀ ವಸಂತ್ ಕುಂಜಾರು ಅವರು ಸಂಘದ ಕಡೆಯಿಂದ ಮಾಡುತ್ತಿರುವ ಇಂತಹ ಪ್ರಯತ್ನಕ್ಕೆ ಕೃತಜ್ಞತೆ ಹಾಗೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಎಲ್ಲಾ ಚಟುವಟಿಕೆಗಳನ್ನು ಸಂಘದ ಅಧ್ಯಕ್ಷರಾದ ಶ್ರೀನಿವಾಸ ಸಾಫಲ್ಯ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಗೌ. ಪ್ರ.ಕಾರ್ಯದರ್ಶಿ ಶ್ರೀ ಭಾಸ್ಕರ್ ಸಪಲಿಗ, ಮಾಜಿ ಕಾರ್ಯದರ್ಶಿ ಶ್ರೀಮತಿ ಶೋಭಾ ಬಂಗೇರ ಮತ್ತು ಆಡಳಿತ ಸಮಿತಿ ಸದಸ್ಯ ಶ್ರೀ ಕಿರಣ್ ಸಪಲಿಗ, ‘ಸಾಫಲ್ಯ’ ಪತ್ರಿಕೆಯ ಸಂಪಾದಕಿ ಡಾ.ಜಿ.ಪಿ.ಕುಸುಮ ಹಾಗೂ ಆಡಳಿತ ಸಮಿತಿ ಮತ್ತು ಯುವ ವಿಭಾಗದವರ ಸಹಕಾರದೊಂದಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಲಕ್ಷ್ಮಿ ಮೆಂಡನ್ ಮತ್ತು ವಿಭಾಗದ ಇತರ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು.



Related posts

ಶ್ರೀಕೃಷ್ಣ ವಿಠಲ ಪ್ರತಿಷ್ಠಾನ : ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ , ಸಾಧಕರಿಗೆ ಸನ್ಮಾನ.

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೋಟೆ , ಇದರ ಆಟಿಡೋಂಜಿ ದಿನ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ – ಪುಸ್ತಕ ಸಾಮಗ್ರಿ ವಿತರಣೆ

Mumbai News Desk

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ಸಂಭ್ರಮೊಲ್ಲಸದ ರಜತ ಮಹೋತ್ಸವ ಸಮಾರಂಭ

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk