34 C
Mumbai
March 6, 2026
Mumbai News Kannada
ಸುದ್ದಿ

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ





ಭಾರತದಿಂದ ಪರಾರಿಯಾಗಿದ್ದ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ) ಇಬ್ಬರು ಪ್ರಮುಖ ಆರೋಪಿಗಳಲ್ಲಿ ಮೆಹುಲ್ ಚೋಕ್ಸಿ ಒಬ್ಬರು.

ಕೇಂದ್ರ ತನಿಖಾ ದಳದ (ಸಿಬಿಐ) ಆದೇಶದ ಮೇರೆಗೆ ಶನಿವಾರ ಚೋಕ್ಸಿಯನ್ನು ಬಂಧಿಸಲಾಗಿದ್ದು, ಅವರು ಇನ್ನೂ ಜೈಲಿನಲ್ಲಿದ್ದಾರೆ. ವರದಿಯ ಪ್ರಕಾರ, ಚೋಕ್ಸಿಯನ್ನು ಬಂಧಿಸುವಾಗ, ಬೆಲ್ಜಿಯಂ ಪೊಲೀಸರು ಮುಂಬೈ ನ್ಯಾಯಾಲಯವು ಅವರ ವಿರುದ್ಧ ಹೊರಡಿಸಿದ ಎರಡು ಮುಕ್ತ ಬಂಧನ ವಾರಂಟ್‌ಗಳನ್ನು ಉಲ್ಲೇಖಿಸಿದ್ದಾರೆ. ಈ ವಾರಂಟ್‌ಗಳು ಮೇ 23, 2018 ಮತ್ತು ಜೂನ್ 15, 2021 ರ ದಿನಾಂಕದ್ದಾಗಿವೆ.

2018ರಲ್ಲಿ ದೇಶದಿಂದ ಪರಾರಿಯಾಗಿದ್ದ ಚೋಕ್ಸಿ, ಆರಂಭದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು ಎಂದು ಹೇಳಾಗುತ್ತಿತ್ತು. ಆದರೆ, ಇತ್ತೀಚೆಗೆ ಅವರು ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಸಿಬಿಐ ಬೆಲ್ಜಿಯಂ ಸರ್ಕಾರಕ್ಕೆ ಮನವಿ ಮಾಡಿತ್ತು. ಅನಾರೋಗ್ಯ ಮತ್ತು ಇತರ ಕಾರಣಗಳನ್ನು ಉಲ್ಲೇಖಿಸಿ ಅವರು ಜಾಮೀನು ಕೋರುವ ನಿರೀಕ್ಷೆಯಿದೆ.

ಚೋಕ್ಸಿ ಸೋದರಳಿಯ ನೀರವ್ ಮೋದಿ ಪಿಎನ್‌ಬಿಗೆ 13,850 ಕೋಟಿ ರೂ. ವಂಚಿಸಿದ್ದು, ಅವರನ್ನು ಕರೆತರಲು ಸಿದ್ಧತೆ ನಡೆಯುತ್ತಿವೆ.



Related posts

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ.

Mumbai News Desk