32 C
Mumbai
March 7, 2026
Mumbai News Kannada
ಸುದ್ದಿ

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.





ರೋಮನ್ ಕ್ಯಾಥೋಲಿಕ್ ಚರ್ಚನ ಮುಖ್ಯಸ್ಥ ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಪ್ರಾನ್ಸಿಸ್ ಅವರು ಇಂದು ಬೆಳಿಗ್ಗೆ (ಎ. 21) ನಿಧನರಾಗಿದ್ದಾರೆ.
ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಪೋಪ್ ಪ್ರಾನ್ಸಿಸ್ (88) ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್ ನ ಕಾಸಾ ಸಾಂತಾ ಮಾರ್ಟದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ವಿಶೇಷವೆಂದರೆ ಅವರು ಭಾನುವಾರದಂದು ಜನರನ್ನು ಉದ್ದೇಶಿಸಿ ಮಾತನಾಡಿದರು, ಆ ಸಮಯದಲ್ಲಿ ಅವರು ಚಿಂತನೆಯ ಸ್ವಾತಂತ್ರ್ಯ ಮತ್ತು ಸಹಿಷ್ಣುತೆ ಬಗ್ಗೆ ಮಾತನಾಡಿದರು.ಜನರಿಗೆ ಈಸ್ಟರ್ ಹಬ್ಬದ ಶುಭಾಶಯಗಳು ಎಂದು ಹೇಳಿದ್ದರು.ಅವರ ಧ್ವನಿ ಮೊದಲಿಗಿಂತ ಹೆಚ್ಚು ಶಕ್ತಿಶಾಲಿಯಾಗಿರುವಂತೆ ತೋರುತ್ತಿತ್ತು.
12 ವರ್ಷಗಳ ಕಾಲ ವಿಶ್ವದ 1.4 ಬಿಲಿಯನ್ ರೋಮನ್ ಕ್ಯಾಥೋಲಿಕರ ಆಧ್ಯಾತ್ಮಿಕ ನಾಯಕರಾಗಿದ್ದ ಪೋಪ್ ಫ್ರಾನ್ಸಿಸ್ ಅವರ ಮರಣವು ರೋಮನ್ ಕ್ಯಾಥೋಲಿಕ್ ಚರ್ಚಿನಲ್ಲಿ ಹೊಸ ಪೋಪ್ ಅವರನ್ನು ನೇಮಿಸುವ ಸಾಂಪ್ರದಾಯಿಕ ಮತ್ತು ನಿಗೂಢ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಈ ಪ್ರಕ್ರಿಯೆಯನ್ನು ಕಾನ್ಕಗೇವ್ ಎಂದು ಕರೆಯಲಾಗುತ್ತದೆ ವಾಸ್ತವವಾಗಿ ಪೋಪ್ ಅವರನ್ನು ಕ್ಯಾಥೋಲಿಕ್ ಚರ್ಚಿನ ಸರ್ವೋಚ್ಚ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತಿದೆ. ಅವರನ್ನು ಏಸುಕ್ರಿಸ್ತನ ಶಿಷ್ಯರಲ್ಲಿ ಪ್ರಮುಖರಾಗಿದ್ದ ಸಂತ ಪೀಟರ್ ಅವರ ಉತ್ತರಾಧಿಕಾರಿಯಂದು ಪರಿಗಣಿಸಲಾಗಿದೆ. ಈ ಕಾರಣಕ್ಕಾಗಿ ಪೋಪ್ ಚರ್ಚನ ಸಿದ್ಧಾಂತಗಳು ಮತ್ತು ನಂಬಿಕೆಗಳ ಮೇಲೆ ಸಂಪೂರ್ಣ ಅಧಿಕಾರವನ್ನು ಹೊಂದಿದ್ದಾರೆ.



Related posts

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಶಷಾಂಕ್ ಅಶೋಕ್ ಐಲ್, ಸಿಎ ಉತ್ತೀರ್ಣ

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ ಸೂರ್ಯಕಾಂತ್ ಜಯ ಸುವರ್ಣ ರಿಗೆ” ಬ್ರಹ್ಮಶ್ರೀ “ಪ್ರಶಸ್ತಿ ಪ್ರದಾನ.

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk