September 6, 2026
Mumbai News Kannada
ಸುದ್ದಿ

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.





ರೋಮನ್ ಕ್ಯಾಥೋಲಿಕ್ ಚರ್ಚನ ಮುಖ್ಯಸ್ಥ ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಪ್ರಾನ್ಸಿಸ್ ಅವರು ಇಂದು ಬೆಳಿಗ್ಗೆ (ಎ. 21) ನಿಧನರಾಗಿದ್ದಾರೆ.
ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಪೋಪ್ ಪ್ರಾನ್ಸಿಸ್ (88) ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್ ನ ಕಾಸಾ ಸಾಂತಾ ಮಾರ್ಟದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ವಿಶೇಷವೆಂದರೆ ಅವರು ಭಾನುವಾರದಂದು ಜನರನ್ನು ಉದ್ದೇಶಿಸಿ ಮಾತನಾಡಿದರು, ಆ ಸಮಯದಲ್ಲಿ ಅವರು ಚಿಂತನೆಯ ಸ್ವಾತಂತ್ರ್ಯ ಮತ್ತು ಸಹಿಷ್ಣುತೆ ಬಗ್ಗೆ ಮಾತನಾಡಿದರು.ಜನರಿಗೆ ಈಸ್ಟರ್ ಹಬ್ಬದ ಶುಭಾಶಯಗಳು ಎಂದು ಹೇಳಿದ್ದರು.ಅವರ ಧ್ವನಿ ಮೊದಲಿಗಿಂತ ಹೆಚ್ಚು ಶಕ್ತಿಶಾಲಿಯಾಗಿರುವಂತೆ ತೋರುತ್ತಿತ್ತು.
12 ವರ್ಷಗಳ ಕಾಲ ವಿಶ್ವದ 1.4 ಬಿಲಿಯನ್ ರೋಮನ್ ಕ್ಯಾಥೋಲಿಕರ ಆಧ್ಯಾತ್ಮಿಕ ನಾಯಕರಾಗಿದ್ದ ಪೋಪ್ ಫ್ರಾನ್ಸಿಸ್ ಅವರ ಮರಣವು ರೋಮನ್ ಕ್ಯಾಥೋಲಿಕ್ ಚರ್ಚಿನಲ್ಲಿ ಹೊಸ ಪೋಪ್ ಅವರನ್ನು ನೇಮಿಸುವ ಸಾಂಪ್ರದಾಯಿಕ ಮತ್ತು ನಿಗೂಢ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಈ ಪ್ರಕ್ರಿಯೆಯನ್ನು ಕಾನ್ಕಗೇವ್ ಎಂದು ಕರೆಯಲಾಗುತ್ತದೆ ವಾಸ್ತವವಾಗಿ ಪೋಪ್ ಅವರನ್ನು ಕ್ಯಾಥೋಲಿಕ್ ಚರ್ಚಿನ ಸರ್ವೋಚ್ಚ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತಿದೆ. ಅವರನ್ನು ಏಸುಕ್ರಿಸ್ತನ ಶಿಷ್ಯರಲ್ಲಿ ಪ್ರಮುಖರಾಗಿದ್ದ ಸಂತ ಪೀಟರ್ ಅವರ ಉತ್ತರಾಧಿಕಾರಿಯಂದು ಪರಿಗಣಿಸಲಾಗಿದೆ. ಈ ಕಾರಣಕ್ಕಾಗಿ ಪೋಪ್ ಚರ್ಚನ ಸಿದ್ಧಾಂತಗಳು ಮತ್ತು ನಂಬಿಕೆಗಳ ಮೇಲೆ ಸಂಪೂರ್ಣ ಅಧಿಕಾರವನ್ನು ಹೊಂದಿದ್ದಾರೆ.



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಧನ ಸಹಾಯ

Mumbai News Desk

ಮುಂಬೈ : ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಪ್ರವೇಶ ಪ್ರಾರಂಭ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk