April 22, 2025
ಸುದ್ದಿ

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ



ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ (ಏ. 19)ರಂದು ವರ್ಷವಧಿ ಉತ್ಸವದಂದು ಮಹಾರಥೋತ್ಸವದ ಸಂದರ್ಭದಲ್ಲಿ ರಥದ
ಮೇಲ್ಭಾಗ ಕುಸಿದು ಬಿದ್ದಿದ್ದು ಈ ಬಗ್ಗೆ ಶೀಘ್ರದಲ್ಲಿ ಒಂಬತ್ತು ಮಾಗಣೆಯ ಸಭೆ ಕರಿದು ಮುಂದಿನ ನಿರ್ಣಯ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರ್ಧರಿಸಿದೆ.
ರಥದ ಮೂಲ ಸ್ವರೂಪದಲ್ಲಿ ಹೊಸ ರಥ ನಿರ್ಮಾಣಕ್ಕೆ ಚಿಂತನೆ ನಡೆಯುತ್ತಿದ್ದು, ಇದಕ್ಕೆ 2 ವರ್ಷ ತಗಲಬಹುದು.
ಹಳೆಯ ರಥ ದುರಸ್ತಿಗೋಳಿಸಲು 30 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರಸರು ಮುಂಬಯಿ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.
ಸುಮಾರು 400 ವರ್ಷ ಹಳೆಯ ಬ್ರಹ್ಮರಥವನ್ನು, ಹಿಂದೆ ಹಲವು ಬಾರಿ ನವೀಕರಣಗೊಳಿಸಲಾಗಿದ್ದು, ಕಳೆದ ರಥೋತ್ಸವ ಸಂಧರ್ಭ ಮುಂಭಾಗದ ಎಡ ಚಕ್ರ ಹೂತು ಹೋಗಿತ್ತು, ಈ ಬಾರಿಯೂ ಅದೇ ಚಕ್ರದ ಒಳಭಾಗದ ಅಕ್ಸಿಲ್ ತುಂಡಾಗಿ ರಥದ ಮೇಲ್ಭಾಗ ಮುರಿದು ಬೀಳಲು ಕಾರಣವಾಯಿತು.
ರಥ ಮುರಿದ ಘಟನೆ ಬಗ್ಗೆ ಶೀಘ್ರದಲ್ಲಿ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ 32 ಗ್ರಾಮಗಳ ಭಕ್ತರ ಸಭೆ ನಡೆಸಿ, ಅಷ್ಟಮಂಗಳ ಪ್ರಶ್ನೆ ಇಡಲು ನಿರ್ಧಾರ ಮಾಡಲಾಗಿದೆ ಎಂದು ದುಗ್ಗಣ್ಣ ಸಾವಂತರಸರು ತಿಳಿಸಿದ್ದಾರೆ.

Related posts

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಅಂತರಾಷ್ಟ್ರೀಯ ಖ್ಯಾತಿಯ ಜ್ಯೋತಿಷಿ, ಪುರೋಹಿತರಾದ ಡಾ. ಎಂ. ಜೆ. ಪ್ರವೀಣ್ ಭಟ್ ಅವರ ಜಾಹೀರಾತು ಮುಂಬೈ ಲೋಕಲ್ ಟ್ರೈನ್ ನಲ್ಲಿ ನೀಡಿ ಅಭಿಮಾನ ಮೆರೆದ ಅವರ ಅಭಿಮಾನಿ.

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ

Mumbai News Desk

ಯುಎಇ ಬಂಟ್ಸ್ ನ 47ನೇ ವರ್ಷದ “ಗಲ್ಫ್ ಬಂಟೋತ್ಸವ-2024″* ಡಾ.ಕೆ.ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ” ಪ್ರಶಸ್ತಿ ಪ್ರಧಾನ

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk