July 23, 2026
Mumbai News Kannada
ಸುದ್ದಿ

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ







ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ಪ್ರವಾಸಿ ತಾಣದಲ್ಲಿಯೇ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ನಿವಾಸಿ ಸಾವನ್ನಪ್ಪಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ಕೃತ್ಯ ನಡೆದಿದೆ. ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಅವರು ಜಮ್ಮು ವಿಭಾಗದ ಮೇಲೆ ವಿಶೇಷ ಗಮನ ಹರಿಸಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಆದೇಶಗಳನ್ನು ನೀಡಿದ್ದರು ಎಂಬುದು ಗಮನಾರ್ಹ ಸಂಗತಿ.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk