32 C
Mumbai
March 7, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ






ಕಲ್ಯಾಣ, 24/04/25: “ಕರ್ನಾಟಕ ನಮ್ಮ ಜನ್ಮಭೂಮಿಯಾದರೆ ಮಹಾರಾಷ್ಟ್ರ ನಮ್ಮ ಕರ್ಮಭೂಮಿ.ಹಾಗೆ ಕರ್ನಾಟಕ ರಾಜ್ಯೋತ್ಸವದೊಂದಿಗೆ ಮಹಾರಾಷ್ಟ್ರ ರಾಜ್ಯೋತ್ಸವವನ್ನೂ ಆಚರಿಸಬೇಕೆಂಬ” ಸಂಘದ ಸಲಹೆಗಾರ ಡಾ. ಸುರೇಂದ್ರ ಶೆಟ್ಟಿಯವರ ಆಶಯದಂತೆ ಕಳೆದ 10 ವರ್ಷಗಳಿಂದ ನಾವು ಆಚರಿಸುತ್ತಿದ್ದು, ಈ ವರ್ಷ ಮೇ 1ರಂದು ಕಲ್ಯಾಣ(ಪ)ದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಸಂಜೆ 5ರಿಂದ ಆಚರಿಸಲಾಗುವುದು. ಈ ಭವ್ಯ ಕಾರ್ಯಕ್ರಮದಲ್ಲಿ ಪ್ರಸಿದ್ಧ ನ್ಯಾಯವಾದಿ ಅಡ್ವಕೇಟ್ ಅಕ್ಷತಾ ಪ್ರಭುರವರು ಮುಖ್ಯ ಅತಿಥಿಯಾಗಿ, ಸಾಮಾಜಿಕ ಕಾರ್ಯಕರ್ತ ಶ್ರೀ ಮಿಲಿಂದ ಕುಲಕರ್ಣಿಯವರು ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶ್ರೀ ಅಭಿಜಿತ್ ವಿನಾಯಕ ಚಾಂದೆಕರ್ ರವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಮುಂಬಯಿ ಪರಿಸರದ ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಡಾ. ಶಶೀ ಪ್ರವೀಣ್ ಶೆಟ್ಟಿಯವರನ್ನು ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಗೈದ ಭಕ್ತಿ ಶಾಸ್ತ್ರಿ ಡಾ. ಅಮಿತ್ ಜಯಂತ್ ದೇಶಮುಖ್ ರವರನ್ನು ಸನ್ಮಾನಿಸಲಾಗುವುದು. ವಿವಿಧ ಮನೋರಂಜನೆಯಿಂದ, ಪ್ರೀತಿ ಭೋಜನದಿಂದ ಕೂಡಿದ ಈ ಭವ್ಯ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಚಂದಕಾಣಿಸಿ ಕೊಡಬೇಕಾಗಿ ಪ್ರೋಗ್ರಾಮ್ ಕಮಿಟಿ ಅಧ್ಯಕ್ಷ ಶ್ರೀ ಭಾಸ್ಕರ ಶೆಟ್ಟಿ (ಗುರುದೇವ್), ಸಂಘದ ಅಧ್ಯಕ್ಷ ಶ್ರೀ ಕೆ. ಎನ್. ಸತೀಶ ಹಾಗೂ ಸಮಸ್ತ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸೆ. 27 ರಂದು ನವರಾತ್ರಿ ಉತ್ಸವ .ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

Mumbai News Desk

  ನ 14 ರಂದು ಡೊಂಬಿವಲಿ  ಶ್ರೀ ಜಗದಂಬ  ಮಂದಿರದಲ್ಲಿ ದೀಪೋತ್ಸವ

Mumbai News Desk

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk