July 23, 2026
Mumbai News Kannada
ಸುದ್ದಿ

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:







ಉಡುಪಿ: ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉಪನ್ಯಾಸಕರ ಉಪಸ್ಥಿತಿಯಲ್ಲಿ ಜರಗಿತು. ನಿವೃತ್ತ ಉಪನ್ಯಾಸಕರಾದ ಡಾ| ಎಂ.ಆರ್.ಹೆಗಡೆ, ಡಾ| ಟಿ.ಎನ್.ರಾಮಕೃಷ್ಣ (TNR), ಮೋಹನ್ ಕಲ್ಲೂರಾಯರವರು ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮವು ಜಾನಕಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸುಧಾಕರ ಶೆಟ್ಟಿಯವರು ಸ್ವಾಗತಿಸಿದರು. ನಂತರ ಉಪನ್ಯಾಸಕರಿಗೆ ಗೌರವಾರ್ಪಣೆ ಮಾಡಿ ಗುರುಗಳ ಆಶೀರ್ವಾದ ಪಡೆದು ಕೃತಾರ್ಥರೆನಿಸಿಕೊಂಡರು. ಜೀವನದ ಮೌಲ್ಯಗಳ ಬಗ್ಗೆ ಉಪನ್ಯಾಸಕರು ಸಂದೇಶ ನೀಡಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಮುಂದಿನ ವರ್ಷ 60ರ ಸಂಭ್ರಮದಲ್ಲಿರುವ ಕಾಲೇಜಿನ ಇತಿಹಾಸದಲ್ಲಿ ಇಂತಹ ಸಮ್ಮಿಲನ ನಡೆದದ್ದು ಪ್ರಥಮ ಎಂದರು.
ಕಾರ್ಯಕ್ರಮಕ್ಕೆ ಆಗಮಿಸಿದ ವಿಧ್ಯಾರ್ಥಿಗಳು ತಮ್ಮ ತಮ್ಮ ಪರಿಚಯ ನೀಡಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು.ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದ ಅಲೆವೂರು ನಾಗರಾಜ ಆಚಾರ್ಯ, ಬೈಕಾಡಿ ಸೂರಪ್ಪ ಕುಂದರ್ ಮುಂಬಯಿ, ಹಾಗೂ ಸಕು ಪಾಂಗಾಳ ಇವರನ್ನು ಉಪನ್ಯಾಸಕರು ಗೌರವಿಸಿದರು.
ಮನೋರಂಜನೆಗಾಗಿ ಮುಂಬಯಿಯ ಜಾದೂಗಾರ ಸೂರಪ್ಪ ಕುಂದರ್ ಹಾಗೂ ಶಾಂತಾರಾಮ ಶೆಟ್ಟಿ ಬಳ್ಳಾರಿಯವರು ಜಾದೂ ಪ್ರದರ್ಶನ ನೀಡಿ ರಂಜಿಸಿದರು. ಸಕು ಪಾಂಗಾಳ ಕಾರ್ಯಕ್ರಮ ನಿರೂಪಿಸಿದರು.ಕೊನೆಯಲ್ಲಿ ಸುರೇಶ್ ಬೈಲೂರು ವಂದನಾರ್ಪಣೆ ಗೈದರು.



Related posts

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk