30 C
Mumbai
April 24, 2026
Mumbai News Kannada
ಸುದ್ದಿ

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:





ಉಡುಪಿ: ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉಪನ್ಯಾಸಕರ ಉಪಸ್ಥಿತಿಯಲ್ಲಿ ಜರಗಿತು. ನಿವೃತ್ತ ಉಪನ್ಯಾಸಕರಾದ ಡಾ| ಎಂ.ಆರ್.ಹೆಗಡೆ, ಡಾ| ಟಿ.ಎನ್.ರಾಮಕೃಷ್ಣ (TNR), ಮೋಹನ್ ಕಲ್ಲೂರಾಯರವರು ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮವು ಜಾನಕಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸುಧಾಕರ ಶೆಟ್ಟಿಯವರು ಸ್ವಾಗತಿಸಿದರು. ನಂತರ ಉಪನ್ಯಾಸಕರಿಗೆ ಗೌರವಾರ್ಪಣೆ ಮಾಡಿ ಗುರುಗಳ ಆಶೀರ್ವಾದ ಪಡೆದು ಕೃತಾರ್ಥರೆನಿಸಿಕೊಂಡರು. ಜೀವನದ ಮೌಲ್ಯಗಳ ಬಗ್ಗೆ ಉಪನ್ಯಾಸಕರು ಸಂದೇಶ ನೀಡಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಮುಂದಿನ ವರ್ಷ 60ರ ಸಂಭ್ರಮದಲ್ಲಿರುವ ಕಾಲೇಜಿನ ಇತಿಹಾಸದಲ್ಲಿ ಇಂತಹ ಸಮ್ಮಿಲನ ನಡೆದದ್ದು ಪ್ರಥಮ ಎಂದರು.
ಕಾರ್ಯಕ್ರಮಕ್ಕೆ ಆಗಮಿಸಿದ ವಿಧ್ಯಾರ್ಥಿಗಳು ತಮ್ಮ ತಮ್ಮ ಪರಿಚಯ ನೀಡಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು.ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದ ಅಲೆವೂರು ನಾಗರಾಜ ಆಚಾರ್ಯ, ಬೈಕಾಡಿ ಸೂರಪ್ಪ ಕುಂದರ್ ಮುಂಬಯಿ, ಹಾಗೂ ಸಕು ಪಾಂಗಾಳ ಇವರನ್ನು ಉಪನ್ಯಾಸಕರು ಗೌರವಿಸಿದರು.
ಮನೋರಂಜನೆಗಾಗಿ ಮುಂಬಯಿಯ ಜಾದೂಗಾರ ಸೂರಪ್ಪ ಕುಂದರ್ ಹಾಗೂ ಶಾಂತಾರಾಮ ಶೆಟ್ಟಿ ಬಳ್ಳಾರಿಯವರು ಜಾದೂ ಪ್ರದರ್ಶನ ನೀಡಿ ರಂಜಿಸಿದರು. ಸಕು ಪಾಂಗಾಳ ಕಾರ್ಯಕ್ರಮ ನಿರೂಪಿಸಿದರು.ಕೊನೆಯಲ್ಲಿ ಸುರೇಶ್ ಬೈಲೂರು ವಂದನಾರ್ಪಣೆ ಗೈದರು.



Related posts

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.

Mumbai News Desk

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

Mumbai News Desk

ಗಂಗಾಧರ್ ಜೆ ಪೂಜಾರಿಯವರ ಪಿತೃರಾದ ಜಾರಪ್ಪ ಪೂಜಾರಿಯವರಿಗೆ ಶ್ರದ್ಧಾಂಜಲಿ

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk