April 27, 2025
ಸುದ್ದಿ

ಮುಲುಂಡ್‌ :    ಲ!  ಜಯರಾಮ್ ಮೂಲ್ಯ ನಿಧನ



 

ಕುಲಾಲ ಸಂಘ ಮುಂಬಯಿ ಇದರ,ಪ್ರಾಪರ್ಟಿ ಅಭಿವೃದ್ಧಿ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ, ದಾನಿ ಲ |ಜಯರಾಮ್ ಮೂಲ್ಯ(79) ಅವರು ೨೬.೪.೨೦೨೫ ರಂದು  ಅನಾರೋಗ್ಯದಿಂದ ಅವರ ನಿವಾಸವಾದ
ಶ್ರೀ ವರ್ಧನ್, ವಿಬಿ ಫಡಕೆ ರಸ್ತೆ, ಕೇಳ್ಕರ್ ಕಾಲೇಜು ಹತ್ತಿರ, ಮುಲುಂಡ್ ಪೂರ್ವ ಇಲ್ಲಿ ನಿಧನರಾದರು.
ಅವರು ಮೂಲತ  ಬಜ್ಪೆಯ ಅದ್ಯಪಾಡಿಯವರು,ಮೃತರು ಪತ್ನಿ , ಒರ್ವ ಪುತ್ರ. ಒಬ್ಬಳು ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಜಯರಾಮ್ ಮೂಲ್ಯ ಅವರು ಮುಲುಂಡ್ ಮಿತ್ರವೃಂದ ದ  ಪದಾಧಿಕಾರಿಯಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಕಲೆ, ಕಲಾವಿದರಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದವರು. ಮುಂಬಯಿ ಕುಲಾಲ ಸಂಘದ ಸೇವಾದಳದಲ್ಲಿ ಸೇವಾ ಕರ್ತರಾಗಿ, ಆಸ್ತಿ ಅಭಿವೃದ್ಧಿ ಸಮಿತಿಯ ಕಾರ್ಯ ಧ್ಯಕ್ಷರಾಗಿ,ಸಂಘದ ಥಾಣೆ ಗೊಡ್ ಬಂದರ್ ನಲ್ಲಿರುವ ಜಾಗದ ಅಭಿವೃದ್ಧಿಗಾಗಿ ದಿವಂಗತ ಪಿ ಕೆ ಸಾಲಿಯಾನ್ ಅವರೊಂದಿಗೆ ಅಪಾರವಾಗಿ ಶ್ರಮಿಸಿದವರು. ಸಂಘದ ವಿವಿಧ ಯೋಜನೆಗಳಿಗೆ ಸದಾ ಸಹಕಾರವನ್ನು ನೀಡುತ್ತಾ, ವಿವಿಧ ಪದವಿಗಳನ್ನು ಅಲಂಕರಿಸಿಕೊಂಡವರು.ಮುಲುಂಡ್‌ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿಕೊಂಡವರು.
ಅವರ ಅಂತ್ಯಕ್ರಿಯೆಯಲ್ಲಿ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಕುಲಾಲ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

   ಲ !ಜಯರಾಮ್ ಮೂಲ್ಯ ನಿಧಾನಕ್ಕೆ ಮುಂಬಯಿ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ. ಗೌರವಾಧ್ಯಕ್ಷ ದೇವದಾಸ್ ಕುಲಾಲ್. ಮತ್ತಿತರ ಪದಾಧಿಕಾರಿಗಳು. ಜ್ಯೋತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಸಾಲಿಯಾನ್ ಮತ್ತಿತರ ಸದಸ್ಯರು ದುಃಖ ಸಂತಾಪ ಸೂಚಿಸಿರುವರು.

B. Dinesh Kulal

Mob.: 9821868674

Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸಡಗರದ ದೀಪಾವಳಿ ಹಬ್ಬದ ಆಚರಣೆ

Mumbai News Desk