ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕೆ) 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು,ಶುಕ್ರವಾರ ಪ್ರಕಟಿಸಿದ್ದು ಈ ವರ್ಷ 66.14 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಇಂದು ಬೆಂಗಳೂರಿನ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಫಲಿತಾಂಶದೊಂದಿಗೆ ಪ್ರಥಮ, ಶೇ 89.96 ಫಲಿತಾಂಶದೊಂದಿಗೆ ಉಡುಪಿ ಜೆಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರ್ಗಿ ಕೊನೆಯ ಸ್ಥಾನದಲ್ಲಿದೆ.
ಮಾರ್ಚ್ 21ರಿಂದ ಏಪ್ರಿಲ್ 4ರ ತನಕ ರಾಜ್ಯದ್ಯಂತ ನಡೆದ ಪರೀಕ್ಷೆಯಲ್ಲಿ 2818 ಪರೀಕ್ಷಾ ಕೇಂದ್ರದಲ್ಲಿ ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
