33.9 C
Karnataka
May 6, 2025
ಸುದ್ದಿ

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉದಯ ಎಸ್. ಶೆಟ್ಟಿ



ಮುಂಬಯಿ : ವೈಟ್ ಲಿಫ್ಟರ್ ನಲ್ಲಿ ದೇಶ ವಿದೇಶಗಳಲ್ಲಿ ವಿವಿದೆಡೆ ಮಿಂಚುತ್ತಿರುವ, ಖ್ಯಾತ ವೈಟ್ ಲಿಫ್ಟರ್, ಏಷ್ಯನ್ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಕಮಿಟಿ ಯ ಸದಸ್ಯ ಮುಂಬಯಿಯ ಉದಯ ಎಸ್. ಶೆಟ್ಟಿ ಯವರನ್ನು ಭಾರತದಿಂದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗಾಗಿ ಕತಾರ್ ದೋಹಾಕ್ಕೆ ಆಹ್ವಾನಿಸಲಾಗಿದೆ. ಉದಯ ಎಸ್. ಶೆಟ್ಟಿ ಯವರು ಮೂಲತ ಉಡುಪಿ ಕಟಪಾಡಿ ಸಮೀಪದ ಮಣಿಪುರದವರು.

ಹಲವಾರು ವರ್ಷಗಳಿಂದ ಭಾರತೀಯ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ಅಧಿಕಾರಾವಧಿಯಲ್ಲಿ, ಇವರು ಭಾರತದಲ್ಲಿ ವೇಟ್‌ಲಿಫ್ಟಿಂಗ್ ಕ್ರೀಡೆಯನ್ನು ಉತ್ತೇಜಿಸುವಲ್ಲಿ ಮತ್ತು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಮತ್ತು ದೇಶದಲ್ಲಿ ಮಾಸ್ಟರ್ಸ್ ವೈಟ್ ಲಿಫ್ಟಿಂಗ್ ಸಮುದಾಯದ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಿದ್ದಾರೆ.
ಪೋಲೆಂಡ್‌ನ ಕ್ರಾಕೋವ್ ನಲ್ಲಿ ನಡೆದ ಮಾಸ್ಟರ್ಸ್ ವರ್ಲ್ಡ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉದಯ ಎಸ್ ಶೆಟ್ಟಿ ಯವರು ತನ್ನ ತಂಡದ 7 ಮಂದಿ ವೈಟ್ ಲಿಪ್ಟರ್ಸ್ ನೊಂದಿಗೆ ಭಾರತವನ್ನು ಪ್ರತಿನಿಧಿಕರಿಸಿದ್ದಾರೆ. 1994 ರಿಂದ ಭಾರತೀಯ ವೇಟ್‌ಲಿಫ್ಟಿಂಗ್ ಫೆಡರೇಶನ್ ನ ಅತ್ಯುತ್ತಮ ರೆಫ್ರಿಗಳಲ್ಲಿ ಒಬ್ಬರು. ಹಲವು ದಶಕದಿಂದಲೂ ಉತ್ತಮ ಸಂಘಟಕ ಹಾಗೂ ತಂಡದ ಉತ್ತಮ ಟೀಮ್ ಲೀಡರ್ ಆಗಿ ಇವರು ಗುರುತಿಸಲ್ಪಟ್ಟಿದ್ದಾರೆ. ರಾಷ್ಟ್ರೀಯ ದಾಖಲೆಯೊಂದಿಗೆ ಹಲವು ವರ್ಷಗಳ ರಾಷ್ಟ್ರೀಯ ಚಾಂಪಿಯನ್ ಆಗಿದ್ದು ಮಹಾರಾಷ್ಟ್ರ ಸರಕಾರವು ಇವರಿಗೆ ಛತ್ರಪತಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಅಮೇರಿಕಾದ ಲಾಸ್ ವೇಗಾಸ್ ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ಗೆ ಭಾರತದ ತಂಡವನ್ನು ಪ್ರತಿನಿಧೀಕರಿಸಿದ್ದಾರೆ. ಪ್ಯಾರೀಸ್ ನಲ್ಲಿ ನಡೆದ ಒಲಿಂಪಿಕ್ಸನಲ್ಲಿ ಬಾಗವಹಿಸಿದ್ದಾರೆ. ಇವರು ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಲಿಫ್ಟಿಂಗ್ ಫೆಡರೇಶನ್‌ನ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರಾಗಿದ್ದಾರೆ.

Related posts

ಭಾರತ್ ಬ್ಯಾಂಕ್ ಕುರಿತು ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಪ್ರಕಟಣೆಯ ಬಗ್ಗೆ, ಬ್ಯಾಂಕ್ ನ ಎಂ ಡಿ ಮತ್ತು ಸಿ ಇ ಓ ವಿದ್ಯಾನಂದ ಕರ್ಕೇರರಿಂದ ಸ್ಪಷ್ಟನೆ

Mumbai News Desk

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk