27.7 C
Mumbai
July 23, 2026
Mumbai News Kannada
ಸುದ್ದಿ

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ







ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ.
ಮೇ. 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಹಿಡಿತದಲ್ಲಿರುವ ಒಂಬತ್ತು ಸ್ಥಳಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದ್ದು, ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪಿಓಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು.
ಸರಿಯಾಗಿ ಪಹಲ್ಗಾಮ್ ದಾಳಿಯ ಎರಡು ವಾರಗಳ ಬಳಿಕ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಿರುವ ಭಾರತ 9ನೇಲೆಗಳನ್ನು ಧ್ವಂಸ ಮಾಡಿದೆ ಭಾರತದ ಅಮಾಯಕ 26 ಜೀವಗಳನ್ನು ಬಲಿ ಪಡೆದ ಹಾಗೂ ಭಾರತದಲ್ಲಿ ಇನ್ನಷ್ಟು ಭಯೋತ್ಪಾದಕ ದಾಳಿ ಬಗ್ಗೆ ಯೋಜನೆ ರೂಪಿಸುತಿದ್ದ ನೆಲೆಗಳು ಇವೇ ಎಂದು ಭಾರತೀಯ ಸೇನೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಪಾಕಿಸ್ತಾನದ ವಿರುದ್ಧದ ಕಾರ್ಯಚರಣಿಯ ಮೇಲ್ವಿಚಾರಣೆ ಮಾಡಿದ್ದರು ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಹೇಳಿದರು.



Related posts

ಜೋಗೇಶ್ವರಿ; ಐಲ್ ಬಾಬು ನಿಧನ

Mumbai News Desk

ಮಂಗಳೂರು : ಮೂಲತ್ವ ಫೌಂಡೇಶನ್ ಮತ್ತು ವಿವಿಧ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಬೆಂಗಳೂರು : ರಾಜ್ಯಪಾಲರಿಂದ ಗೀತಾಲಕ್ಷ್ಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ: ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಮನ್ನಣೆ

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk