30 C
Mumbai
April 24, 2026
Mumbai News Kannada
ಸುದ್ದಿ

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ





ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ.
ಮೇ. 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಹಿಡಿತದಲ್ಲಿರುವ ಒಂಬತ್ತು ಸ್ಥಳಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದ್ದು, ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪಿಓಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು.
ಸರಿಯಾಗಿ ಪಹಲ್ಗಾಮ್ ದಾಳಿಯ ಎರಡು ವಾರಗಳ ಬಳಿಕ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಿರುವ ಭಾರತ 9ನೇಲೆಗಳನ್ನು ಧ್ವಂಸ ಮಾಡಿದೆ ಭಾರತದ ಅಮಾಯಕ 26 ಜೀವಗಳನ್ನು ಬಲಿ ಪಡೆದ ಹಾಗೂ ಭಾರತದಲ್ಲಿ ಇನ್ನಷ್ಟು ಭಯೋತ್ಪಾದಕ ದಾಳಿ ಬಗ್ಗೆ ಯೋಜನೆ ರೂಪಿಸುತಿದ್ದ ನೆಲೆಗಳು ಇವೇ ಎಂದು ಭಾರತೀಯ ಸೇನೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಪಾಕಿಸ್ತಾನದ ವಿರುದ್ಧದ ಕಾರ್ಯಚರಣಿಯ ಮೇಲ್ವಿಚಾರಣೆ ಮಾಡಿದ್ದರು ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಹೇಳಿದರು.



Related posts

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk