30.9 C
Mumbai
June 8, 2026
Mumbai News Kannada
ಮುಂಬಯಿ

ಎಸ್. ಎಸ್. ಸಿ. ಫಲಿತಾಂಶ: ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಿತ ಮಂಜುನಾಥ ವಿದ್ಯಾಲಯಕ್ಕೆ ಶೇ. 100 ಫಲಿತಾಂಶ






ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ

ಕನ್ನಡ ಮಾಧ್ಯಮದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣ ರಾಗಿ ಶಾಲೆಗೆ ಶೇ.100 ಪ್ರತಿಶತ ಫಲಿತಾಂಶ ತಂದಿರುತ್ತಾರೆ. ಅವರಲ್ಲಿ 4 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಶೇ. 92 ಅಂಕಗಳೊಂದಿಗೆ ಸ್ನೇಹ ರಾಜು ಭಂಡಾರೆ ಪ್ರಥಮ, ಜಯಂತಿ ತಾರಾಸಿಂಗ್ ಚವ್ಹಾನ್ ಶೇ. 81.40 ಅಂಕಗಳೊಂದಿಗೆ ದ್ವಿತೀಯ, ಅರ್ಜುನ್ ಸುನೀಲ್ ರಾಠೋಡ್ ಶೇ. 79 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ಆಂಗ್ಲ ಮಾಧ್ಯಮದಲ್ಲಿ ಒಟ್ಟು 139 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 74 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 54 ವಿದ್ಯಾ ರ್ಥಿಗಳು ಪ್ರಥಮ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಆಂಗ್ಲ ಮಾಧ್ಯಮದಲ್ಲಿ ಶೇ 96.80 ಅಂಕಗಳೊಂದಿಗೆ ಪ್ರಾಚಿ ಅವದೇಶ್ ಯಾದವ್ ಪ್ರಥಮ, ಶೇ 95.80 ಅಂಕಗಳೊಂದಿಗೆ ದುರ್‌ವ ಅಭಿಜಿತ್ ಕ್ಷೀರ್ ಸಾಗರ್ ದ್ವಿತೀಯ, ಹಾಗೂ ಶೇ 95.40 ಅಂಕಗಳೊಂದಿಗೆ ನಿಧಿ ನಿತ್ಯಾನಂದ ನಾಯಕ್ ತೃತೀಯ ಸ್ಥಾನ ಪಡೆದಿದ್ದಾರೆ.
ತಮ್ಮ ಸಾಧನೆಯ ಮೂಲಕ ಶಾಲೆಯ ಕೀರ್ತಿಯನ್ನು ಉತ್ತುಂಗ ಶಿಖರಕ್ಕೇರಿಸಿದ ವಿದ್ಯಾರ್ಥಿಗಳಿಗೆ, ಅವರ ಯಶಸ್ಸಿಗೆ ಕಾರಣರಾದ ಮುಖ್ಯ ಶಿಕ್ಷಕರಾದ ಸುರೇಖಾ ಪಂಡಿತ್, ಪ್ರಭು ಕೋತಾಲಿ ಹಾಗೂ ಶಿಕ್ಷಕ/ಶಿಕ್ಷಕಿ ವೃಂದ, ಪಾಲಕರು, ಶಿಕ್ಷಕೇತರ ಸಿಬ್ಬಂದಿಯನ್ನು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ , ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಕಾರ್ಯಾಧ್ಯಕ್ಷರಾದ ಡಾ! ಇಂದ್ರಾಳಿ ದಿವಾಕರ್ ಟಿ ಶೆಟ್ಟಿ ಉಪಕಾರ್ಯಾಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಗೌರವ ಕಾರ್ಯದರ್ಶಿ ಪ್ರೊ! ಅಜಿತ್ ಬಿ ಉಮ್ರಾಣಿ, ಜತೆ ಕಾರ್ಯದರ್ಶಿ ದಿನೇಶ್ ಬಿ ಕುಡ್ವ, ಕೋಶಾಧಿಕಾರಿ ತಾರಾನಾಥ ಸೂರು ಅಮೀನ್ , ಜತೆ ಕೋಶಾಧಿಕಾರಿ ವಿಮಲಾ ವಿ ಶೆಟ್ಟಿ ಹಾಗೂ ಕಾರ್ಯಕಾರಿ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ



Related posts

ಕುಲಾಲ ಸಂಘದ ವತಿಯಿಂದ ಸಂಭ್ರಮದ ಗಣೇಶೋತ್ಸವ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಿದ್ಧಿ ಪ್ರದೀಪ್ ಶೆಟ್ಟಿಶೇಕಡಾ 94% ಅಂಕ.

Mumbai News Desk

ಬೊರಿವಲಿ ಪೂರ್ವ, ಶ್ರೀ ಜಗದೀಶ್ವರಿ ಬ್ರಹ್ಮ ಬೈದರ್ಕಳ ಗರಡಿಯ ವತಿಯಿಂದ ರಕ್ತದಾನ ಶಿಬಿರ

Mumbai News Desk

ಮುಂಬೈ : ವಿಕ್ರೋಲಿಯ ಪಾರ್ಕ್ ಸೈಟ್‌ನ ವರ್ಷಾ ನಗರದ ಜನಕಲ್ಯಾಣ್ ಸೊಸೈಟಿಯಲ್ಲಿ ಭೂಕುಸಿತ, ಇಬ್ಬರು ಸಾವು

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಮಿತ್ ಉಮೇಶ್ ಪೂಜಾರಿಗೆ ಶೇ 87.40 ಅಂಕ.

Mumbai News Desk

ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

Mumbai News Desk