30 C
Mumbai
April 24, 2026
Mumbai News Kannada
ಸುದ್ದಿ

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ





ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಖರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ‘ಹಾರ್ಟ್ ಲ್ಯಾಂಪ್ ‘ ಎಂಬ ಕೃತಿಗೆ ಈ ಪ್ರಶಸ್ತಿ ಲಭಿಸಿದೆ,ಹಾಗಾಗಿ ಕರುನಾಡಿಗೆ ಪ್ರತಿಷ್ಟಿತ ಬೂಕರ್ ಪ್ರಶಸ್ತಿ ಒಲಿದಿದೆ. ಮಂಗಳವಾರ ಇಂಗ್ಲೆಂಡ್ ನಲ್ಲಿ ನಡೆದ ಸಮಾರಂಭದಲ್ಲಿ ಮುಷ್ತಾಕ್ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಪ್ರಶಸ್ತಿಯ ಮೊತ್ತ ಅಂದಾಜು 57.28 ಲಕ್ಷ ರೂಪಾಯಿ.
ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್ ಮೂಲತ: ಹಾಸನದವರು. ಇತ್ತೀಚೆಗೆ ಫೆಬ್ರವರಿಯಲ್ಲಿ ಅವರ ಕೃತಿ ಲಾಂಗ್ ಲಿಸ್ಟ್ ನಲ್ಲಿ ಆಯ್ಕೆಯಾಗಿತ್ತು . 12 ಕಥೆಗಳನ್ನು ಒಳಗೊಂಡ “ಹಸೀನಾ ಮತ್ತು ಇತರ ಕಥೆಗಳು” ಎಂಬ ಕೃತಿಯನ್ನು ದೀಪಾ ಭಸ್ತಿ ಅವರು ಕನ್ನಡದಿಂದ ದ ಇಂಗ್ಲಿಷ್ ಗೆ ಅನುವಾದ ಮಾಡಿದ್ದಾರೆ. ಸಾಕಷ್ಟು ಕೃತಿಗಳು ಬೂಕರ್ ಪ್ರಶಸ್ತಿಗೆ ನಿರ್ದೇಶಿತವಾಗಿದ್ದವು. ಅಂತಿಮವಾಗಿ ಆರು ಕೃತಿಗಳು ಸ್ಥಾನ ಪಡೆದಿದ್ದವು. “ಯಾವುದೇ ಕಥೆ ಸಣ್ಣದಲ್ಲ, ಅನುಭವವೆಂಬ ವಸ್ತ್ರದ ಪ್ರತಿಯೊಂದು ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದ ಈ ಪುಸ್ತಕ ರಚಿಸಲಾಗಿದೆ” ಎಂದು ಪ್ರಶಸ್ತಿ ಸ್ವೀಕರಿಸಿ ಬಾನು ಮುಷ್ತಾಕ್ ತಿಳಿಸಿದರು.



Related posts

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಕುಲಾಲ ಭವನ ಉದ್ಘಾಟನೆ: ದಾನಿಗಳು ಮತ್ತು ಗಣ್ಯರಿಗೆ ಕುಲಾಲ ಸಂಘ ಮುಂಬೈ ವತಿಯಿಂದ ಗೌರವ ಸನ್ಮಾನ

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk