24.5 C
Karnataka
May 30, 2025
ಸುದ್ದಿ

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್



 ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.

 ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ ನೀಡಬಾರದು. ಕೋಮು ಪ್ರಚೋದನೆ ನೀಡುವ ಮಾಹಿತಿಗಳಿದ್ದರೆ, ತಕ್ಷಣವೇ ಪೊಲೀಸರಿಗೆ ತಿಳಿಸಬೇಕು. ಸಾರ್ವಜನಿಕರು ಯಾವುದೇ ಪ್ರಚೋದನೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

ಈ ಹಿಂದಿನ ಎಸ್ಪಿ ಅರುಣ್ ಕುಮಾರ್ ಅವರು, ಅಕ್ರಮ ಚಟುವಟಿಕೆ ವಿರುದ್ಧ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೆಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದರೋ ಅವುಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

 ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

Related posts

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk

ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ಪ್ರಧಾನಿ ಮೋದಿ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ:

Chandrahas