24.9 C
Karnataka
May 31, 2025
ಸುದ್ದಿ

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು



ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿದ ಘಟನೆ ಮೇ 30ರಂದು ರಾತ್ರಿ ನಡೆದಿದೆ.
ಮೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಹಲವಾರು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದ್ದ ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಮೃತಪಟ್ಟಿವೆ.
ಅಪ್ಪು ಮತ್ತು ತೋನ್ಸೆ ಕೋಣಗಳು 2022- 23 ಋತುವಿನ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಅದರಲ್ಲೂ ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದೆ. ಮತ್ತೊಂದು ಕೋಣ ಅಪ್ಪು ಕನೆಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಸಾಧನೆ ಮಾಡಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತಿದೆ. ಅದೆಷ್ಟೋ ಕಂಬಳ ಕರೆಗಳಲ್ಲಿ ಓಡಿ ಪ್ರಶಸ್ತಿಗೆ ಕೊರಳೋಡಿದ್ದ ಕೋಣಗಳೆರಡು ಯಾರೂ ಊಹಿಸದ ರೀತಿಯಲ್ಲಿ ಇಹಲೋಕ ತ್ಯಜಿಸಿದ್ದು ಒಂದು ದುರಂತ.

Related posts

ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್, ಯಕ್ಷ ಸಂಭ್ರಮ 2023

Mumbai News Desk

ಗೊರೆಗಾಂವ್ ಶ್ರೀ ಶಾಂತಾದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಧಾರ್ಮಿಕ ಸಭೆ

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

Mumbai News Desk