30.9 C
Mumbai
June 8, 2026
Mumbai News Kannada
ತುಳುನಾಡು

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ





ಯಕ್ಷಗಾನ ಯುವಮನಸುಗಳಿಗೂ ಆಪ್ತವಾಗಲು ಪಟ್ಲರ ಶ್ರಮ ಕಾರಣ“ -ನಾಡೋಜ ಜಿ.ಶಂಕರ್*


ಚಿತ್ರ ವರದಿ : ದಿನೇಶ್ ಕುಲಾಲ್

ಮಂಗಳೂರು ಜೂ1. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮದ ರಾಷ್ಟ್ರೀಯ ಕಲಾ ಸಮ್ಮೇಳನ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಳಿಕ ಮಾತಾಡಿದ ನಾಡೋಜ ಜಿ.ಶಂಕರ್ ಅವರು, “ಕಳೆದ 10 ವರ್ಷಗಳಿಂದ ಪಟ್ಲ ಫೌಂಡೇಶನ್ ಟ್ರಸ್ಟ್ ಜನಮೆಚ್ಚಿದ ಕೆಲಸವನ್ನು ಮಾಡುತ್ತ ಬಂದಿದೆ. ಈಗಿನ ಪೀಳಿಗೆ ಯಕ್ಷಗಾನ ಕಲೆಯ ಬಗ್ಗೆ ಅಷ್ಟಾಗಿ ಅಭಿರುಚಿಯನ್ನು ಹೊಂದಿಲ್ಲ. ಆದರೆ ಪಟ್ಲರ ಕಾರ್ಯ ಸಾಧನೆಯಿಂದ ಯಕ್ಷಗಾನ ಇಂದು ಯುವ ಮನಸುಗಳಿಗೂ ಆಪ್ತವಾಗಿದೆ. ಉಡುಪಿಯಲ್ಲೂ ನಮ್ಮ ಟ್ರಸ್ಟ್ ಪಟ್ಲರ ಜೊತೆಗೆ ಕೈಜೋಡಿಸಲಿದೆ. ಇದೊಂದು ಒಳ್ಳೆಯ ಕಾರ್ಯಕ್ರಮ. ಪಟ್ಲರ ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ದುಡಿದಾಗ ಕಲಾವಿದರ ಬದುಕು ಹಸನಾಗುತ್ತದೆ” ಎಂದರು.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತಾಡಿ, “ಯಕ್ಷಗಾನ ಮಲೆನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುನ್ನತ ಕಲೆ. ನಮ್ಮ ಕ್ಷೇತ್ರದ ಮಕ್ಕಳಿಗೆ ಯಕ್ಷಗಾನ ಕಲಿಸುತ್ತಿರುವ ಪಟ್ಲ ಸತೀಶ್ ಶೆಟ್ಟಿಯವರು ಅಭಿನಂದನಾರ್ಹರು. ಇಂತಹ ಕಾರ್ಯಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕಿದೆ“ ಎಂದರು.
ವೇದಿಕೆಯಲ್ಲಿ ಆದಿತ್ಯ ಕಿಮ್ಮನೆ, ಮಂಗಳೂರು ಕುಲಪತಿ ಪ್ರೊ.ಕೆ.ಎಲ್.ಧರ್ಮ, ರಾಜೇಶ್ ಕಾರಂತ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮುನಿಯಾಲ್ ಉದಯ ಕುಮಾರ್ ಶೆಟ್ಟಿ, ದಶಮ ಸಂಭ್ರಮದ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾ ಗೌರವ-2025 ಅನ್ನು ಅಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಈಶ್ವರ ಭಟ್, ಮಂಗಳೂರು ವಿವಿ ಮಾಜಿ ಕುಲಪತಿ ಪ್ರೊ. ಬಿ.ಎ. ವಿವೇಕ್ ರೈ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ನಿವೃತ್ತ ಯೋಧ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರ ಸುಳ್ಯ ಇದರ ಜೀವನ್ ರಾಮ್ ಸುಳ್ಯ ಅವರಿಗೆ ಪ್ರದಾನ ಮಾಡಲಾಯಿತು. ಸಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.
B. Dinesh Kulal
Mob.: 9821868674



Related posts

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ

Mumbai News Desk

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ಹೆಜಮಾಡಿ : ಅದ್ದೂರಿಯಾಗಿ ಜರುಗಿದ ‘ಸ್ತ್ರೀ ಸ್ಫೂರ್ತಿ-2026’ ಕಾರ್ಯಕ್ರಮ

Mumbai News Desk

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk