32 C
Mumbai
April 24, 2026
Mumbai News Kannada
ಸುದ್ದಿ

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್





ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ದಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಪೊಲೀಸರು ಮತ್ತು ಗ್ರಹ ಇಲಾಖೆ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲಿ ಈ ಬೆಳವಣಿಗೆ ನಡೆಯುತ್ತಿದೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಮಂದಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲೆಯಾದ ಬೆನ್ನಲ್ಲಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ವಿರುದ್ಧ ಗಡಿಪಾರು ನೋಟಿಸ್ ನೀಡಲಾಗಿದೆ.
ಕರ್ನಾಟಕ ಪೊಲೀಸ್ ಆದಿ ನಿಯಮ 1963 ಕಾಯ್ದೆ ಕಲಂ : 58 ರಡಿ ನೋಟಿಸ್ ಜಾರಿ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲ್ಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಪುತ್ತಿಲ ಅವರನ್ನು ಗಡಿಪಾರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವವರ ಹಾಗೂ ಕೋಮು ಪ್ರಚೋದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಖಡಕ್ ಸೂಚನೆ ನೀಡಿದ್ದರು.ಇದರ ಬೆನ್ನಲ್ಲೇ ಹಿಂದು ಮುಖಂಡರ ವಿರುದ್ಧ ಕ್ರಮ ಆರಂಭವಾಗಿದೆ. ಆದರೆ ಅರುಣ್ ಪುತ್ತಿಲಗೆ ಯಾವ ಕಾರಣಕ್ಕಾಗಿ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ನಲ್ಲಿ ಉಲ್ಲೇಖಿಸಿಲ್ಲ.



Related posts

ತಿರುಮಲದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ ಸಂಪನ್ನ: ಮುಂಬೈನ ತಂಡದಿಂದ ಭಕ್ತಿ ಸಮರ್ಪಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk

ಆಶಾ ಭೋಸ್ಲೆ ಅವರ ಆರೋಗ್ಯದಲ್ಲಿ ಏರುಪೇರು: ಮುಂಬೈನ ಆಸ್ಪತ್ರೆಗೆ ದಾಖಲು

Mumbai News Desk

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,

Mumbai News Desk