29.2 C
Karnataka
June 3, 2025
ಸುದ್ದಿ

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ



ಮುಂಬಯಿ : ಕರ್ನಾಟಕ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಕಳೆದ 40 ವರ್ಷಗಳಿಂದ ಸೇವೆ ಮಾಡುತ್ತಿದ್ದ ಬ್ಯಾಂಕಿನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರು ಮೇ 31ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕರ್ನಾಟಕ ಬ್ಯಾಂಕಿನ ಕಾಂದಿವಲಿ ಪಶ್ಚಿಮ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರಿಗೆ ಭ್ಯಾಂಕಿನ ಸಿಬ್ಬಂದಿಗಳು ಬೀಳ್ಕೊಡುವ ಸಮಾರಂಭವನ್ನು ಏರ್ಪಡಿಸಿದ್ದು ಇದಕ್ಕೆ ಮೊದಲು ಬೊರಿವಲಿ ಪಶ್ಚಿಮ ಶಾಖೆಯಲ್ಲಿ ದೀರ್ಘ ಕಾಲ ಸೇವೆ ಮಾಡಿದ ನಾರಾಯಣ ಮೊಗವೀರ ತನ್ನ ಸೇವಾ ಅವಧಿಯಲ್ಲಿ ಸಹಕರಿಸಿದ ಹಾಗೂ ಪ್ರೋತ್ಸಾಹ ನೀಡಿದ ಎಲ್ಲಾ ಹಿರಿ ಹಿರಿಯ ಸಿಬ್ಬಂದಿ ಹಾಗೂ ಗ್ರಾಹಕರಿಗೆ ಅಬಾರ ವ್ಯಕ್ತಪಡಿಸಿದರು.

ಕರ್ನಾಟಕ ಬ್ಯಾಂಕಿನ ರೀಜನಲ್ ಕಚೇರಿಯ ಮುಖ್ಯ ಪ್ರಬಂಧಕ ಸರಿನ್ ಹರಿ, ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಗೌರವ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ, ಶಾಖೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದು ನಿವೃತ್ತಿ ಜೀವನ ನಡೆಸಲಿರುವ ನಾರಾಯಣ ಮೊಗವೀರ ಅವರಿಗೆ ಈ ಸಂದರ್ಭದಲ್ಲಿ ಶುಭ ಹಾರೈಸಿದರು.

Related posts

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk