July 23, 2026
Mumbai News Kannada
ಸುದ್ದಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು







ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 11ಜನ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಬೆಂಗಳೂರಿಗೆ ಆರ್‌ಸಿಬಿ ತಂಡವು ಬಂದಿದ್ದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಾಲ್ತುಳಿತ ದುರಂತ ಆಘಾತವನ್ನುಂಟು ಮಾಡಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮೊದಲ ಬಾರಿ ಐಪಿಎಲ್‌ ಟ್ರೋಫಿಯನ್ನು ಗೆದ್ದಿದೆ. ಆದರೆ, ಈ ಸಂಭ್ರಮಾಚರಣೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಬೆಂಗಳೂರಿಗೆ ಆರ್‌ಸಿಬಿ ತಂಡ ಬರಲಿದೆ ಎಂದು ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಜನ ಸೇರಿದ್ದರು. ಸಾವಿರಾರು ಜನರನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಲಿಲ್ಲ. ಬೆಂಗಳೂರು ಪೊಲೀಸರು ಆರ್‌ಸಿಬಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ವಿಧಾನಸೌಧದ ಬಳಿ ಬರಬಾರದು ಎಂದು ಹೇಳಿದ್ದರೂ. ಸಾವಿರಾರು ಜನ ಅಭಿಮಾನಿಗಳು ವಿಧಾನಸೌಧದ ಬಳಿ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಎಂಟ್ರಿಯಲ್ಲಿ ಭಾರೀ ನೂಕುನುಗ್ಗಲು ಸೃಷ್ಟಿಯಾಗಿದ್ದು ಕಾಲ್ತುಳಿತವಾಗಿದೆ.

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡವರನ್ನು ಬೆಂಗಳೂರಿನ ಪೊಲೀಸರು ಎತ್ತುಕೊಂಡು ಓಡಿ ಹೋಗುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಮನಕಲಕುವಂತೆ ಇವೆ.

ಅಭಿಮಾನಿಗಳು ಸಂತೋಷದಿಂದ ಕುಣಿದಾಡುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ಭಾರೀ ಜನ ಸೇರಲಿದ್ದಾರೆ ಎನ್ನುವ ಕಾರಣಕ್ಕೆ ತೆರೆದ ಬಸ್‌ನಲ್ಲಿ ಮೆರವಣಿಗೆಯನ್ನು ರಾಜ್ಯ ಸರ್ಕಾರವು ರದ್ದುಪಡಿಸಿತ್ತು. ಕಾನೂನು ಹಾಗೂ ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಯನ್ನು ರದ್ದುಪಡಿಸಿರುವುದಾಗಿ ಹೇಳಲಾಗಿತ್ತು.



Related posts

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಉಡುಪಿ : ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರಿಗೆ ಮನವಿ ಸಲ್ಲಿಕೆ

Mumbai News Desk

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಿಶೇಷ ಸಭೆ :

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk