September 6, 2026
Mumbai News Kannada
ಸುದ್ದಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು





ಬೆಂಗಳೂರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು. ಈ ದುರಂತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 11ಜನ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಬೆಂಗಳೂರಿಗೆ ಆರ್‌ಸಿಬಿ ತಂಡವು ಬಂದಿದ್ದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಾಲ್ತುಳಿತ ದುರಂತ ಆಘಾತವನ್ನುಂಟು ಮಾಡಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮೊದಲ ಬಾರಿ ಐಪಿಎಲ್‌ ಟ್ರೋಫಿಯನ್ನು ಗೆದ್ದಿದೆ. ಆದರೆ, ಈ ಸಂಭ್ರಮಾಚರಣೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಬೆಂಗಳೂರಿಗೆ ಆರ್‌ಸಿಬಿ ತಂಡ ಬರಲಿದೆ ಎಂದು ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಜನ ಸೇರಿದ್ದರು. ಸಾವಿರಾರು ಜನರನ್ನು ನಿಯಂತ್ರಿಸುವುದಕ್ಕೆ ಬೆಂಗಳೂರು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಲಿಲ್ಲ. ಬೆಂಗಳೂರು ಪೊಲೀಸರು ಆರ್‌ಸಿಬಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ವಿಧಾನಸೌಧದ ಬಳಿ ಬರಬಾರದು ಎಂದು ಹೇಳಿದ್ದರೂ. ಸಾವಿರಾರು ಜನ ಅಭಿಮಾನಿಗಳು ವಿಧಾನಸೌಧದ ಬಳಿ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಎಂಟ್ರಿಯಲ್ಲಿ ಭಾರೀ ನೂಕುನುಗ್ಗಲು ಸೃಷ್ಟಿಯಾಗಿದ್ದು ಕಾಲ್ತುಳಿತವಾಗಿದೆ.

ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡವರನ್ನು ಬೆಂಗಳೂರಿನ ಪೊಲೀಸರು ಎತ್ತುಕೊಂಡು ಓಡಿ ಹೋಗುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಮನಕಲಕುವಂತೆ ಇವೆ.

ಅಭಿಮಾನಿಗಳು ಸಂತೋಷದಿಂದ ಕುಣಿದಾಡುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ಭಾರೀ ಜನ ಸೇರಲಿದ್ದಾರೆ ಎನ್ನುವ ಕಾರಣಕ್ಕೆ ತೆರೆದ ಬಸ್‌ನಲ್ಲಿ ಮೆರವಣಿಗೆಯನ್ನು ರಾಜ್ಯ ಸರ್ಕಾರವು ರದ್ದುಪಡಿಸಿತ್ತು. ಕಾನೂನು ಹಾಗೂ ಸುವ್ಯವಸ್ಥೆಯ ದೃಷ್ಟಿಯಿಂದ ಮೆರವಣಿಗೆಯನ್ನು ರದ್ದುಪಡಿಸಿರುವುದಾಗಿ ಹೇಳಲಾಗಿತ್ತು.



Related posts

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಥೈಲ್ಯಾಂಡ್ ನಲ್ಲಿ ಅಂತರಾಷ್ಟ್ರೀಯ ಎಂಡ್ಯೂರೆನ್ಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್: ದಿವಿನಾ ಸಿ. ಕಣ್ಣಂಗಾರ್ ಹ್ಯಾಟ್ರಿಕ್ ಚಿನ್ನದ ಪದಕ.

Mumbai News Desk

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk

ಮುಂಬೈ : ಶಾಂತಾ ಸುಬ್ಬಯ್ಯ ನಿಧನ

Mumbai News Desk