July 23, 2026
Mumbai News Kannada
ಸುದ್ದಿ

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.








ಮುಂಬಯಿ: ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಜೂ 4ರಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.

ಮೃತರು ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರದ ಗೌರವಾಧ್ಯಕ್ಷರು, ಶ್ರೀನಾರಾಯಣಗುರು ಏಜ್ಯುಕೇಶನಲ್‌&ಕಲ್ಬರಲ್ ಟ್ರಸ್ಟ್ ಕುಂದಾಪುರದ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.



Related posts

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಮೂಡುಬಿದ್ರೆ ಮಹಾವೀರ ಕಾಲೇಜಿನ ವಜ್ರ ಮಹೋತ್ಸವದ ಸಿದ್ಧತೆಗಾಗಿ ಮಾ. 22ರಂದು ಮುಂಬೈನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆ

Mumbai News Desk

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk

ಥಾಣೆ : ಶಾರದ ಎಲ್ ಕರ್ಕೇರ ನಿಧನ

Mumbai News Desk